ಅನರ್ಹತೆ ನಿರ್ಧಾರ ಅಧಿಕಾರ ಸ್ಪೀಕರ್‌ಗೆ ಬೇಡ : ಸುಪ್ರೀಂ

Kannadaprabha News   | Asianet News
Published : Jan 22, 2020, 11:38 AM IST
ಅನರ್ಹತೆ ನಿರ್ಧಾರ ಅಧಿಕಾರ ಸ್ಪೀಕರ್‌ಗೆ ಬೇಡ : ಸುಪ್ರೀಂ

ಸಾರಾಂಶ

ಸಂಸದ-ಶಾಸಕರ ಅನರ್ಹತೆಯನ್ನು ನಿರ್ಧರಿಸುವ ಹೊಣೆಯನ್ನು ಸ್ಪೀಕರ್‌ ಬದಲಿಗೆ ಸುಪ್ರೀಂಕೋರ್ಟ್‌ ಅಥವಾ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಕಾಯಂ ನ್ಯಾಯಾಧಿಕರಣಕ್ಕೆ ವಹಿಸುವ ಬಗ್ಗೆ ಸುಪ್ರೀಂಕೋರ್ಟ್ 

ನವದೆಹಲಿ [ಜ.22]:  ‘ಸಭಾಧ್ಯಕ್ಷರು ಕೂಡ ಒಂದು ರಾಜಕೀಯ ಪಕ್ಷಕ್ಕೆ ಸೇರಿದವರಾಗಿರುತ್ತಾರೆ. ಹೀಗಾಗಿ ಸಂಸದ-ಶಾಸಕರ ಅನರ್ಹತೆಯನ್ನು ನಿರ್ಧರಿಸುವ ಹೊಣೆಯನ್ನು ಸ್ಪೀಕರ್‌ ಬದಲಿಗೆ ಸುಪ್ರೀಂಕೋರ್ಟ್‌ ಅಥವಾ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಕಾಯಂ ನ್ಯಾಯಾಧಿಕರಣಕ್ಕೆ ವಹಿಸುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು ಸಂಸತ್ತು ಗಂಭೀರ ಚಿಂತನೆ ನಡೆಸಬೇಕು’ ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಸಲಹೆ ನೀಡಿದೆ.

ಮಣಿಪುರದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದ ಸಚಿವ ಶ್ಯಾಮಕುಮಾರ್‌ ಅವರ ಅನರ್ಹತೆ ಕೋರಿ ಇಬ್ಬರು ಕಾಂಗ್ರೆಸ್‌ ಶಾಸಕರು ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸ್ಪೀಕರ್‌ ವಿಳಂಬ ಮಾಡುತ್ತಿರುವ ಕಾರಣ, ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸುವ ಸಂದರ್ಭದಲ್ಲಿ ನ್ಯಾ ರೋಹಿನ್ಟನ್‌ ನಾರಿಮನ್‌ ನೇತೃತ್ವದ ತ್ರಿಸದಸ್ಯ ಪೀಠ, ಈ ಮಹತ್ವದ ಸಲಹೆಯನ್ನು ಸಂಸತ್ತಿಗೆ ನೀಡಿದೆ.

‘ಸ್ಪೀಕರ್‌ ಕೂಡ ಒಂದು ರಾಜಕೀಯ ಪಕ್ಷಕ್ಕೆ ಸೇರಿರುತ್ತಾರೆ. ಅಲ್ಲದೆ, ಇತ್ತೀಚಿನ ಕೆಲವು ಪ್ರಕರಣಗಳನ್ನು ಗಮನಿಸಿದಾಗ ಸ್ಪೀಕರ್‌ ಅವರ ಸ್ವಾತಂತ್ರ್ಯದ ಬಗ್ಗೆ ಪದೇ ಪದೇ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಹಾಗಾಗಿ ಶಾಸಕ-ಸಂಸದರ ಅನರ್ಹತೆಯನ್ನು ಸ್ಪೀಕರ್‌ ಬದಲಿಗೆ ಸ್ವತಂತ್ರ ಸಂಸ್ಥೆಗೆ ವಹಿಸುವುದು ಸೂಕ್ತ. ಇದು ಇಂದಿನ ತುರ್ತು ಅಗತ್ಯ’ ಎಂದು ಪೀಠ ಹೇಳಿತು.

ಸಿಎಎ ವಿರುದ್ಧ ಕಾನೂನು ಸಮರಕ್ಕೆ 320 ಕ್ವಿಂಟಲ್‌ ಭತ್ತ ಕೊಟ್ಟ ರೈತರು!.

3 ತಿಂಗಳಲ್ಲಿ ಅನರ್ಹತೆ ನಿರ್ಧರಿಸಬೇಕು:  ‘ಒಂದು ವೇಳೆ ನಿಯಮಬಾಹಿರವಾಗಿ ಪಕ್ಷಾಂತರ ಮಾಡಿದರೆ ಶಾಸಕ/ಸಂಸದರು ಒಂದು ದಿನ ಕೂಡ ಆ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ. ಇಂಥ ಸಂದರ್ಭದಲ್ಲಿ ಅನರ್ಹತೆ ಅರ್ಜಿಗಳನ್ನು ಸಭಾಧ್ಯಕ್ಷರು ಅನಿರ್ದಿಷ್ಟಅವಧಿಗೆ ಬಾಕಿ ಇಟ್ಟುಕೊಂಡು ಕೂಡದೇ ಕಾಲಮಿತಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಸ್ಪೀಕರ್‌ ಅವರು 3 ತಿಂಗಳೊಳಗೆ ಇಂಥ ಅರ್ಜಿಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ’ ಎಂದು ಹೇಳಿತು.

ಗಡಿವಿವಾದ: ಸುಪ್ರೀಂ ತೀರ್ಪಿಗೆ ಬದ್ಧ ಎಂದ ಸಂಜಯ ರಾವುತ್‌!...

ಇನ್ನು ಮಣಿಪುರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪೀಠ, ‘ಮಣಿಪುರ ವಿಧಾನಸಭಾಧ್ಯಕ್ಷರು ಸಚಿವ ಶ್ಯಾಮಕುಮಾರ್‌ ಅನರ್ಹತೆಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು 4 ವಾರದಲ್ಲಿ ವಿಲೇವಾರಿ ಮಾಡಬೇಕು. ಒಂದು ವೇಳೆ 4 ವಾರದಲ್ಲಿ ಇತ್ಯರ್ಥವಾಗದೇ ಹೋದರೆ, ಅನರ್ಹತೆ ಕೋರಿ ಅರ್ಜಿ ಸಲ್ಲಿಸಿರುವ ಇಬ್ಬರು ಕಾಂಗ್ರೆಸ್‌ ಶಾಸಕರು ಪುನಃ ಸುಪ್ರೀಂ ಕೋರ್ಟ್‌ಗೆ ಬರಬಹುದು’ ಎಂದು ನ್ಯಾ. ನಾರಿಮನ್‌ ಹೇಳಿದರು.

ಇತ್ತೀಚೆಗೆ ಕರ್ನಾಟಕ ವಿಧಾನಸಭೆಯಲ್ಲಿ ಕೂಡ ಇಂಥದ್ದೇ ವಿವಾದ ಸೃಷ್ಟಿಯಾಗಿತ್ತು. ಸ್ಪೀಕರ್‌ ಅವರು ತಮ್ಮ ರಾಜೀನಾಮೆ ಪರಿಗಣಿಸದೇ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಇತರ ಶಾಸಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು