'ಕುಂಭ ಮೇಳ, ಚುನಾವಣೆ..  ಸುಪ್ರೀಂ ಕೋರ್ಟ್ ಮೊದಲೇ ಬರಬೇಕಿತ್ತು'

Published : Apr 26, 2021, 12:00 AM ISTUpdated : Apr 26, 2021, 12:02 AM IST
'ಕುಂಭ ಮೇಳ, ಚುನಾವಣೆ..  ಸುಪ್ರೀಂ ಕೋರ್ಟ್ ಮೊದಲೇ ಬರಬೇಕಿತ್ತು'

ಸಾರಾಂಶ

ಕೊರೋನಾ ಎರಡನೇ ಅಲೆ ಅಬ್ಬರ/ ಸುಪ್ರೀಂ ಕೋರ್ಟ್  ಈ ಮೊದಲೇ ಮಧ್ಯ ಪ್ರವೇಶ ಮಾಡಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ/ ಕೇಂದ್ರದ ನಾಐಕತ್ವ ಶಕ್ತಿ ಕಳೆದುಕೊಂಡಿದೆ/ ಶಿವಸೇನೆ ಆರೋಪ

ಮುಂಬೈ (ಏ. 25) ಕೊರೋನಾ ಕಾಣದಲ್ಲಿ ಚುನಾವಣೆ ಮೆರವಣಿಗೆ ಮತ್ತು ಕುಂಭಮೇಳ ನಡೆಸಿದ  ಬಗ್ಗೆ ಶಿವಸೇನೆ ಅಸಮಾಧಾನ ಹೊರಹಾಕಿದೆ.  ಸುಪ್ರೀಂ ಕೋರ್ಟ್ ಇದಕ್ಕೂ ಮುನ್ನವೇ ಮಧ್ಯ ಪ್ರವೇಶ ಮಾಡಿದಿದ್ದರೆ ಪರಿಸ್ಥತಿ ಇಷ್ಟು ಬಿಗಡಾಯಿಸುತ್ತಿರಲಿಲ್ಲ ಎಂದಿದೆ.

ಆಮ್ಲ ಜನಕ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ  ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ.  ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ವಿಚಾರವನ್ನು ಎತ್ತಿಕೊಂಡಿದೆ. 

ಮದುವೆ ವೇಳೆ ಮಾಸ್ಕ್ ಧರಿಸದ ವಧುವಿಗೆ ದಂಡ

ಹರಿದ್ವಾರದ ಜನ ನಿರ್ಲಕ್ಷಕ್ಕೆ ಬಲಿಯಾಗುವ ಕೆಲಸ ಇರಲಿಲ್ಲ ಎಂದು ಹೇಳಿದೆ.  ದೆಹಲಿ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ಆಕ್ಸಿಜನ್ ಸಿಗುತ್ತಿಲ್ಲ.. ಇಂಥ ಸ್ಥಿತಿ ಬರುತ್ತದೆ ಎಂದು ಗೊತ್ತಿರಲಿಲ್ಲವೇ? ಎಂದು ಪ್ರಶ್ನೆ ಮಾಡಿದೆ. ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಕಾರಣವಲ್ಲವೇ? ಎಂದು ಕೇಳಿದೆ.

ಮುಂಬೈ, ವಿಹಾರ್, ನಾಸಿಕ್, ಬಾಂದ್ರಾದಲ್ಲಿನ ಪರಿಸ್ಥಿಯ ಬಗ್ಗೆಯೂ ವಿಷಾದ ವ್ಯಕ್ತಪಡಿಸಿದೆ.  ದೇಶದ ಅಗ್ರ ನಾಯಕತ್ವ ಸಂಪೂರ್ಣ ವಿಫಲವಾಗಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ರಾಜಕಾರಣವನ್ನು ಮರೆತು ಜನರ ಒಳಿತಿಗೆ ಕೆಲಸ ಮಾಡಬೇಕು.  ಈ ಮಾತು ಎಲ್ಲ ರಾಜಕೀಯ ಪಕ್ಷಗಳಿಗೂ ಅನ್ವಯವಾಗುತ್ತದೆ ಎಂದು ಶಿವಸೇನೆ ಹೇಳಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್