ಜೀವ ತೆಗೆದ ಬಿಸಿಯೂಟ: ಕಡಾಯಿಯಲ್ಲಿ ಬಿದ್ದು ಅಸುನೀಗಿದ ಕಂದ!

Suvarna News   | Asianet News
Published : Feb 04, 2020, 12:29 PM IST
ಜೀವ ತೆಗೆದ ಬಿಸಿಯೂಟ: ಕಡಾಯಿಯಲ್ಲಿ ಬಿದ್ದು ಅಸುನೀಗಿದ ಕಂದ!

ಸಾರಾಂಶ

ಬಿಸಿಯೂಟ ತಯಾರಿಸುವ ಕಡಾಯಿಯಲ್ಲಿ ಬಿದ್ದ ಮಗು| ಮೂರು ವರ್ಷದ ಪುಟ್ಟ ಕಂದ ಅಂಚಲ್ ಸಾವು| ಉತ್ತರಪ್ರದೇಶದ ಮಿರ್ಜಾಪುರ್ ಜಿಲ್ಲೆಯಲ್ಲಿ ದಾರುಣ ಘಟನೆ| ರಾಂಪುರ್ ಅಟ್ಟಾರಿ ಪ್ರಾಥಮಿಕ ಶಾಲೆಯಲ್ಲಿ ದುರ್ಘಟನೆ| ಆಟ ಆಡುತ್ತಾ ಕಡಾಯಿಯಲ್ಲಿ ಬಿದ್ದ ಮೂರು ವರ್ಷದ ಅಂಚಲ್| ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ ಮಗು| ಶಾಲಾ ಮುಖ್ಯೋಪಾಧ್ಯಯ ಸಂತೋಷ್ ಕುಮಾರ್ ಯಾದವ್ ಅಮಾನತು|

ಮಿರ್ಜಾಪುರ್(ಫೆ.04): ಶಾಲೆಯ ಬಿಸಿಯೂಟ ತಯಾರಿಸುವ ಕಡಾಯಿಯಲ್ಲಿ ಮೂರು ವರ್ಷದ ಮಗುವೊಂದು ಬಿದ್ದು ಅಸುನೀಗಿರುವ ದಾರುಣ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಲಾಲ್’ಗಂಜ್ ಬಳಿಯಿರುವ ರಾಂಪುರ್ ಅಟ್ಟಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ವೇಳೆ, ಆಟ ಆಡುತ್ತಿದ್ದ ಮೂರು ವರ್ಷದ ಪುಟ್ಟ ಕಂದ ಅಂಚಲ್ ಬಿಸಿ ಕಡಾಯಿಯಲ್ಲಿ ಬಿದ್ದು ಅಸುನೀಗಿದ್ದಾಳೆ.

ದೇಶಾದ್ಯಂತ 3 ವರ್ಷದಲ್ಲಿ ಬಿಸಿಯೂಟ ತಿಂದ 900 ಮಕ್ಕಳು ಅಸ್ವಸ್ಥ!

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಅಂಚಲ್’ಳನ್ನು ಶಾಲಾ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾಋಇಯಾಗದೇ ಮಗು ಮೃತಪಟ್ಟಿದೆ ಎಂಧು ಸ್ಪಷ್ಟಪಡಿಸಿದ್ದಾರೆ.

ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲಿದ ಅಂಚಲ್ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾಳೆ ಎಂದು ಜಿಲ್ಲಾಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ.

ಬಿಸಿಯೂಟ ಸೇವಿಸಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ಪೊಷಕರು ದೌಡು

ಇನ್ನು ಅಂಚಲ್ ಸಾವಿನ ಹಿನ್ನೆಲಯಲ್ಲಿ ಶಾಲಾ ಮುಖ್ಯೋಪಾಧ್ಯಯ ಸಂತೋಷ್ ಕುಮಾರ್ ಯಾದವ್ ಅವರನ್ನು ಅಮಾನತುಗೊಳಿಸಲಾಗಿದ್ದು, ಬಿಸಯೂಟ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!