ಇನ್ನು 20 ದಿನಕ್ಕೆ ದೇಶದಲ್ಲಿ 2ನೇ ಅಲೆ ಅಬ್ಬರ ತುತ್ತತುದಿಗೆ!

Published : Mar 26, 2021, 08:30 AM IST
ಇನ್ನು 20 ದಿನಕ್ಕೆ ದೇಶದಲ್ಲಿ 2ನೇ ಅಲೆ ಅಬ್ಬರ ತುತ್ತತುದಿಗೆ!

ಸಾರಾಂಶ

ಇನ್ನು 20 ದಿನಕ್ಕೆ ದೇಶದಲ್ಲಿ 2ನೇ ಅಲೆ ಅಬ್ಬರ ತುತ್ತತುದಿಗೆ!| ಈ ಬಾರಿ 25 ಲಕ್ಷ ಮಂದಿಗೆ ಸೋಂಕು: ಎಸ್‌ಬಿಐ ವರದಿ

 

ನವದೆಹಲಿ: ದೇಶದಲ್ಲಿ ಕಂಡುಬರುತ್ತಿರುವ ಕೊರೋನಾ ವೈರಸ್‌ ಅಬ್ಬರ 2ನೇ ಅಲೆಯ ಸ್ಪಷ್ಟಸೂಚನೆ. ಇದು ಏಪ್ರಿಲ್‌ ಮಧ್ಯಭಾಗದ ವೇಳೆಗೆ ತುತ್ತತುದಿಗೆ ತಲುಪಬಹುದು ಎಂದು ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಸಿದ್ಧಪಡಿಸಿರುವ ವರದಿ ಎಚ್ಚರಿಸಿದೆ. ಮಾ.23ರವರೆಗಿನ ಅಂಕಿ-ಸಂಖ್ಯೆಗಳನ್ನು ಆಧರಿಸಿ ಹೇಳುವುದಾದರೆ, ಎರಡನೇ ಅಲೆಯಲ್ಲಿ ದೇಶದ 25 ಲಕ್ಷ ಮಂದಿಗೆ ಸೋಂಕು ತಗುಲಬಹುದು. ಒಟ್ಟಾರೆ ಫೆ.15ರಿಂದ 100 ದಿನಗಳ ಕಾಲ ಈ ಎರಡನೆ ಅಲೆ ಇರಬಹುದು ಎಂದು ಭವಿಷ್ಯ ನುಡಿದಿದೆ.

ಸೋಂಕು ನಿಗ್ರಹಕ್ಕೆ ಸ್ಥಳೀಯ ಮಟ್ಟದಲ್ಲಿ ಲಾಕ್‌ಡೌನ್‌ ಅಥವಾ ನಿರ್ಬಂಧಗಳನ್ನು ಹೇರುವುದು ಪರಿಣಾಮಕಾರಿಯಾಗುವುದಿಲ್ಲ. ಕೊರೋನಾ ವಿರುದ್ಧದ ಹೋರಾಟದಲ್ಲಿ ವಿಜಯಿಯಾಗಲು ಸಾಮೂಹಿಕ ಲಸಿಕಾ ಅಭಿಯಾನವೇ ಏಕೈಕ ವಿಶ್ವಾಸ ಎಂದು 28 ಪುಟಗಳ ವರದಿಯಲ್ಲಿ ಎಸ್‌ಬಿಐ ತಿಳಿಸಿದೆ.

ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲವೊಂದು ರಾಜ್ಯಗಳು ಲಾಕ್‌ಡೌನ್‌ ಅಥವಾ ಇನ್ನಿತರೆ ನಿರ್ಬಂಧಗಳನ್ನು ಹೇರಿವೆ. ಅವುಗಳ ಪರಿಣಾಮ ಮುಂದಿನ ತಿಂಗಳು ಗೊತ್ತಾಗಲಿದೆ ಎಂದು ಹೇಳಿದೆ. ದೇಶದ ಎಲ್ಲ ರಾಜ್ಯಗಳಲ್ಲೂ ಕೊರೋನಾ ಲಸಿಕೆ ಅಭಿಯಾನಕ್ಕೆ ವೇಗ ನೀಡಬೇಕು. ಸದ್ಯ ನಿತ್ಯ 34 ಲಕ್ಷ ಮಂದಿಗೆ ಲಸಿಕೆ ನೀಡಲಾಗುತ್ತಿದ್ದು, ಇದನ್ನು 40ರಿಂದ 45 ಲಕ್ಷಕ್ಕೆ ಹೆಚ್ಚಳ ಮಾಡಬೇಕು. ಹೀಗಾದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಇನ್ನು 4 ತಿಂಗಳಲ್ಲಿ ಸಂಪೂರ್ಣವಾಗಿ ಲಸಿಕೆ ನೀಡಬಹುದಾಗಿದೆ ಎಂದು ವರದಿ ಸಲಹೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!