ಅನ್‌ಲಾಕ್ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಸುದ್ಧಿಗೋಷ್ಠಿ; ಮತ್ತೆ ಲಾಕ್‌ಡೌನ್ ಎಚ್ಚರಿಕೆ!

Published : Jul 06, 2021, 05:41 PM IST
ಅನ್‌ಲಾಕ್ ಬೆನ್ನಲ್ಲೇ  ಕೇಂದ್ರ ಆರೋಗ್ಯ ಇಲಾಖೆ  ಸುದ್ಧಿಗೋಷ್ಠಿ; ಮತ್ತೆ ಲಾಕ್‌ಡೌನ್ ಎಚ್ಚರಿಕೆ!

ಸಾರಾಂಶ

ಅನ್‌‌ಲಾಕ್ ಬೆನ್ನಲ್ಲೇ ಮತ್ತೊಂದು ಲಾಕ್‌ಡೌನ್ ವಾರ್ನಿಂಗ್ ಜನರಿಗೆ ಎಚ್ಚರಿಕೆ ನೀಡಿದ ಕೇಂದ್ರ ಆರೋಗ್ಯ ಇಲಾಖೆ ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದಂತೆ ಲಾಕ್‌ಡೌನ್ ಆತಂಕ

ನವದೆಹಲಿ(ಜು.06):  ಕೊರೋನಾ 2ನೇ ಅಲೆ ಭೀಕರತೆಗೆ ನಲುಗಿದ ಭಾರತ, ಕಠಿಣ ನಿರ್ಬಂಧ, ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ಮೂಲಕ ವೈರಸ್ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಅನ್‌ಲಾಕ್ ಜಾರಿಯಾಗಿದೆ. ಅನ್‌ಲಾಕ್ ಒಂದೊಂದೆ ಹಂತಕ್ಕೆ ವಿಸ್ತರಣೆಯಾಗುತ್ತಿದ್ದಂತೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ಇದೀಗ ಸುದ್ದಿಗೋಷ್ಠಿ ನಡೆಸಿ ಮತ್ತೆ ಲಾಕ್‌ಡೌನ್ ಎಚ್ಚರಿಕೆ ನೀಡಿದೆ.

ಶಿಮ್ಲಾ, ಮನಾಲಿಯಲ್ಲಿ ಜನಜಾತ್ರೆ!

ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಲಾಕ್‌ಡೌನ್ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಅನ್‌ಲಾಕ್ ಘೋಷಣೆಯಾದ ಬೆನ್ನಲ್ಲೇ ಹಿಮಾಚಲ ಪ್ರದೇಶ, ಕುಲು, ಮನಾಲಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಜನ ಸಾಗರವೇ ಹರಿದುಬಂದಿದೆ. ಶೇಕಡಾ 90 ರಷ್ಟು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಇದು ಅಪಾಯಕ್ಕೆ ಅಹ್ವಾನ ನೀಡಿದಂತೆ. ಹೀಗಾಗಿ ಮತ್ತೊಂದು ಲಾಕ್‌ಡೌನ್ ಸಂಕಷ್ಟ ತರಬೇಡಿ ಎಂದು ಜನರಿಗೆ ಎಚ್ಚರಿಸಿದ್ದಾರೆ.

ಬಸ್‌, ಮಾರುಕಟ್ಟೆ, ಅಂಗಡಿಗಳಲ್ಲಿ ಜನವೋ ಜನ! ಹೆಚ್ಚಿದ ಆತಂಕ...

ಮಸೂರಿ, ಉತ್ತರಖಂಡ, ಶಿಮ್ಲಾ, ಧರ್ಮಶಾಲಾದಲ್ಲೂ ಪ್ರವಾಸಿಗರು ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಕೊರೋನಾ ಮಾರ್ಗಸೂಚಿ ಪಾಲನೆ ಅಗತ್ಯ. 2ನೇ ಅಲೆ ಇನ್ನೂ ಸಂಪೂರ್ಣವಾಗಿ ತಗ್ಗಿಲ್ಲ. ಜೊತೆಗೆ ಡೆಲ್ಟಾ ಪ್ಲಸ್, 3ನೇ ಅಲೆ ಭೀತಿ ಕೂಡ ನಮ್ಮ ಮುಂದಿದೆ. ಹೀಗಾಗಿ ಜನರ ಅಜಾಗರೂಕತೆಯಿಂದ ಅಮಾಯಕರನ್ನು ಬಲಿಯಾಗಿಸಬೇಡಿ ಎಂದು ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ