ರೈತ ಕೇವಲ ಉತ್ಪಾದಕನಲ್ಲ, ಉದ್ಯಮಿಯೂ ಹೌದು; ಪ್ರಧಾನಿ ಮೋದಿ!

Published : Aug 29, 2020, 07:33 PM IST
ರೈತ ಕೇವಲ ಉತ್ಪಾದಕನಲ್ಲ, ಉದ್ಯಮಿಯೂ ಹೌದು; ಪ್ರಧಾನಿ ಮೋದಿ!

ಸಾರಾಂಶ

ರೈತನನ್ನು ನಾವು ಕೇವಲ ಆಹಾರೋತ್ಪನ್ನಗಳ ಉತ್ಪಾದಕನಾಗಿ ಮಾತ್ರ ಪರಿಗಣಿಸಬಾರದು, ಆತ ಉದ್ಯಮಿಯೂ ಹೌದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿದ ಮೋದಿ, ದೇಶದ ಕೃಷಿ ಪರಂಪರೆಗೆ ಆಧುನಿಕತೆ ಸ್ಪರ್ಶ ನೀಡಲು ಕರೆ ನೀಡಿದ್ದಾರೆ.

ಬುಂದೇಲ್‌ಖಂಡ್(ಆ.29): ಆಧುನಿಕ ಭಾರತದಲ್ಲಿ ಕೃಷಿಗೆ ಆಧುನಿಕ ತಂತ್ರಜ್ಞಾನ, ಹಾಗೂ ಟೆಕ್ನಾಲಜಿ ಬಳಕೆ ಮಾಡಿ ಹೆಚ್ಚಿನ ಇಳುವರಿ ಪಡೆಯುವ ಕುರಿತು ಯುವ ಕೃಷಿ ವಿದ್ಯಾರ್ಥಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.  ಕೇಂದ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಹೊಸದಾಗಿ ಕಟ್ಟಲಾದ ಜಾನ್ಸಿ ರಾಣಿ ಲಕ್ಷ್ಮೀ ಭಾಯಿ ಕಟ್ಟಡ ಉದ್ಘಾಟನೆ ಮಾಡಿ ಮೋದಿ, ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿದರು.

ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ಗಡಿ ಭಾಗದ ಬುಂದೇಲ್‌ಖಂಡ್ ವಲಯದಲ್ಲಿ ಕೇಂದ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಕಟ್ಟಲಾದ ಹೊಸ ಕಟ್ಟಡ ವಿದ್ಯಾರ್ಥಿಗಳಿಗೆ ಕಲಿಕೆಯ ವಿಸ್ತಾರವನ್ನು ಹೇಳುತ್ತದೆ. ಕಡಿಮೆ ಬೆಲೆಯಲ್ಲಿ ಹಲವು ತಂತ್ರಜ್ಞಾನಗಳು  ಲಭ್ಯವಿದೆ. ಮಳೆ ನೀರು ಕೊಯ್ಲು, ಹನಿ ನೀರಾವರಿ ಸೇರಿದಂತೆ ಹಲವು ಸುಲಭ ಹಾಗೂ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಿ ಹೆಚ್ಚಿನ ಇಳವರಿ ಹಾಗೂ ಆದಾಯ ಪಡೆಯುವತ್ತ ಮುನ್ನಡೆಯಬೇಕು ಎಂದು ಮೋದಿ ಹೇಳಿದರು.

ರೈತ ಕೇವಲ ಆಹಾರ ಉತ್ಪನ್ನಗಳ ಉತ್ಪಾದಕ ಮಾತ್ರವಲ್ಲ, ಜೊತೆಗೆ ಉದ್ಯಮಿಯನ್ನಾಗಿ ಮಾಡಬೇಕಿದೆ. ರೈತನ ಕೈಗಳನ್ನು ಬಲಪಡಿಸಬೇಕಿದೆ. ಟೆಕ್ನಾಲಜಿಗಳನ್ನು ಬಳಸಿಕೊಂಡು, ಕೃಷಿಯಲ್ಲಿ ತೊಡಗುವ ರೈತ, ಹಲವರಿಗೆ ಉದ್ಯೋಗವನ್ನು ನೀಡುತ್ತಾರೆ. ಇಳುವರಿ ಜೊತೆಗೆ ಆದಾಯವನ್ನು ಪಡೆಯುತ್ತಾರೆ ಎಂದು ಮೋದಿ ಹೇಳಿದ್ದಾರೆ.

6 ವರ್ಷಗಳ ಹಿಂದೆ ದೇಶದಲ್ಲಿ ಒಂದೇ ಕೇಂದ್ರ ಕೃಷಿ ವಿಶ್ವವಿದ್ಯಾಲಯವಿತ್ತು. ಇದೀಗ 3 ಕೃಷಿ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆ 3 ಶೈಕ್ಷಣಿಗ ಫಾರ್ಮಿಂಗ್ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಗರೀಬ್ ಕಲ್ಯಾಣ್ ಯೋಜನೆಯಡಿ 700 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಲವರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ
ಇಂಡಿಗೋ ಅವಾಂತರದ ಬಳಿಕ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಫೋಟೋ ಭಾರಿ ವೈರಲ್