
ನವದೆಹಲಿ (ನ.29): ಬ್ರಿಟನ್ನ ಆಕ್ಸ್ಫರ್ಡ್ ವಿವಿ ಮತ್ತು ಆಸ್ಟ್ರಾಜೆನಕಾ ಕಂಪನಿ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆ ‘ಕೋವಿಶೀಲ್ಡ್’ ಅನ್ನು ಪ್ರಾಯೋಗಿಕ ಪರೀಕ್ಷೆ ವೇಳೆ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರಲ್ಲಿ ಅಡ್ಡ ಪರಿಣಾಮ ಬೀರಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರಯೋಗಕ್ಕೆ ಒಳಪಟ್ಟಿದ್ದ ವ್ಯಕ್ತಿ ತಮ್ಮ ವಕೀಲರ ಮೂಲಕ 5 ಕೋಟಿ ರು. ಪರಿಹಾರ ಕೋಟಿ, ಭಾರತದಲ್ಲಿ ಲಸಿಕೆ ಪ್ರಯೋಗ ಮತ್ತು ಉತ್ಪಾದನೆಯ ಹಕ್ಕು ಪಡೆದಿರುವ ಪುಣೆಯ ಸೀರಂ ಇನ್ಸ್ಟಿಟ್ಯೂಟ್ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಗುಣಮುಖ ಆದವರಲ್ಲಿ ಮತ್ತೆ ಕೊರೋನಾ..! .
ಬ್ರಿಟನ್ನಲ್ಲಿ ಇದೇ ಲಸಿಕೆ ಪಡೆದ ವ್ಯಕ್ತಿಯಲ್ಲಿ ತೊಂದರೆ ಕಾಣಿಸಿಕೊಂಡಾಗ, ಅಲ್ಲಿ ಮಾನವ ಪ್ರಯೋಗಕ್ಕೇ ತಡೆ ನೀಡಲಾಗಿತ್ತು. ಆದರೆ ಭಾರತದಲ್ಲಿ ಅಂಥ ಯಾವುದೇ ತಡೆ ನೀಡಿಲ್ಲ.
ಜೊತೆಗೆ ಅಡ್ಡಪರಿಣಾಮ ಬೀರಿದ ವಿಷಯವನ್ನು ಕೂಡಾ ಮುಚ್ಚಿಡಲಾಗಿದೆ. ಈ ಹಿನ್ನೆಲೆಯಲ್ಲಿ 5 ಕೋಟಿ ರು. ಪರಿಹಾರ ಕೋರಿ ನ.21ಕ್ಕೆ ನಾವು ಕಂಪನಿಗೆ ನೋಟಿಸ್ ನೀಡಿದ್ದೇವೆ. ಅವರು ಸೂಕ್ತವಾಗಿ ಪ್ರತಿಕ್ರಿಯಿಸದೇ ಇದ್ದಲ್ಲಿ ಕೋರ್ಟ್ ಮೆಟ್ಟಿಲೇರುವುದಾಗಿ ಸಂತ್ರಸ್ತನ ಪರ ವಕೀಲ ಆರ್.ರಾಜಾರಾಂ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ