ಕೊರೋನಾ ಲಸಿಕಾ ಘಟಕದಲ್ಲಿ ಅಗ್ನಿ ಅವಘಡ : 1000 ಕೋಟಿ ರು. ಹಾನಿ

Kannadaprabha News   | Asianet News
Published : Jan 23, 2021, 08:12 AM ISTUpdated : Jan 23, 2021, 09:15 AM IST
ಕೊರೋನಾ ಲಸಿಕಾ ಘಟಕದಲ್ಲಿ ಅಗ್ನಿ ಅವಘಡ :  1000 ಕೋಟಿ ರು. ಹಾನಿ

ಸಾರಾಂಶ

ಕೊರೋನಾ ಲಸಿಕೆ ಉತ್ಪಾದಕ ಘಟಕದಲ್ಲಿ ಸಂಭವಿಸಿದ ಭಾರೀ ಅಗ್ನಿ  ಅವಘಡದಲ್ಲಿ ಸಾವಿರ ಕೋಟಿಯಷ್ಟು ನಷ್ಟ ಸಂಭವಿಸಿದೆ. ನಷ್ಟದ ಬಗ್ಗೆ ಸಂಸ್ಥೆಯ ಮುಖ್ಯಸ್ಥರು ಹೇಳಿಕೊಂಡಿದ್ದಾರೆ. 

ಪುಣೆ (ಜ.23): ಕೊರೋನಾ ಲಸಿಕೆ ಉತ್ಪಾದಕ ಘಟಕದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 1000 ಕೋಟಿ ರು.ಗಿಂತ ಹೆಚ್ಚಿನ ಮೌಲ್ಯದ ನಷ್ಟವಾಗಿದೆ ಎಂದು ಸೀರಂ ಇನ್‌ಸ್ಟಿಟ್ಯೂಟ್‌ ಹೇಳಿಕೊಂಡಿದೆ. 

ಅಲ್ಲದೆ ಈ ಘಟನೆಯು ಕೇವಲ ಅಪಘಾತಕವೇ ಅಥವಾ ಉದ್ದೇಶಪೂರ್ವಕವೇ ಎಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

 ಈ ಬಗ್ಗೆ ಶುಕ್ರವಾರ ಮಾತನಾಡಿದ ಸೀರಂ ಸಂಸ್ಥೆಯ ಸಿಇಒ ಅದಾರ್‌ ಪೂನವಾಲಾ ಅವರು, ‘ಲಸಿಕೆ ಘಟಕದಲ್ಲಿದ್ದ ಹಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಪರಿಣಾಮ 1000 ಕೋಟಿ ರು.ಗಿಂತ ಹೆಚ್ಚಿನ ಹಾನಿಯಾಗಿದೆ. ಆದರೆ ಕೋವಿಶೀಲ್ಡ್‌ ಲಸಿಕೆ ಉತ್ಪಾದಕ ಘಟಕಕ್ಕೆ ಯಾವುದೇ ಹಾನಿಯಾಗಿಲ್ಲ’ ಎಂದು ಪುನರುಚ್ಚಿಸಿದ್ದಾರೆ.

ಐದು ತಿಂಗಳಲ್ಲಿ 31 ಬಾರಿ ಈಕೆಗೆ ಕೋವಿಡ್‌ ಪಾಸಿಟಿವ್‌! ..

ಈಗಾಗಲೇ ದೇಶದಲ್ಲಿ ಕೊರೋನಾ ಲಸಿಕೆ ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು ಲಕ್ಷಾಂತರ ಮಂದಿಗೆ ಕೊರೋನಾ ಲಸಿಕೆ ನಿಡಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!