
ನವದೆಹಲಿ(ಜೂ.25): ಕರ್ನಾಟಕದ ಮುಖಂಡ ಬಿ.ವಿ. ಶ್ರೀನಿವಾಸ್ ಅವರ ನೇತೃತ್ವದ ಯುವ ಕಾಂಗ್ರೆಸ್ ಘಟಕ ಕೊರೋನಾ 2ನೇ ಅಲೆಯ ವೇಳೆ ಕೈಗೊಂಡ ಕಾರ್ಯವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸಂಕಷ್ಟದ ಸಮಯದಲ್ಲಿ ಯುವ ಕಾಂಗ್ರೆಸ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಕೊರೋನಾ ಸೋಂಕಿತರಿಗೆ ಅಗತ್ಯ ಸೇವೆ ಮತ್ತು ಬೆಂಬಲವನ್ನು ಒದಗಿಸಿದೆ. ಅದೇ ರೀತಿ ದೇಶದೆಲ್ಲೆಡೆ ಕಾಂಗ್ರೆಸ್ನ ಹಲವಾರು ನಾಯಕ, ನಾಯಕಿಯರು ಸ್ವಯಂ ಪ್ರೇರಿತರಾಗಿ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಸಮುದಾಯ ಸೇವೆ ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಪಾಲಸಿಕೊಂಡರು ಬಂದಿರುವ ಸಂಪ್ರದಾಯವಾಗಿದ್ದು, ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ