
ನವದೆಹಲಿ(ಜ.28): ಮಂಗಳವಾರದ ರೈತರ ಟ್ರ್ಯಾಕ್ಟರ್ ರಾರಯಲಿ ವೇಳೆ ನಡೆದ ಕೆಂಪುಕೋಟೆಯ ಮೇಲಿನ ಸಿಖ್ ಧ್ವಜ ಹಾರಿಸಿದ ಘಟನೆಗೆ ನಿಷೇಧಿತ ಸಿಖ್ ಸಂಘಟನೆಯಾದ ‘ಸಿಖ್ ಫಾರ್ ಜಸ್ಟೀಸ್’ ಅತೀವ ಹರ್ಷ ವ್ಯಕ್ತಪಡಿಸಿದೆ.
ಈ ಕುರಿತು 7 ನಿಮಿಷಗಳ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಂಘಟನೆ, ಧ್ವಜ ಹಾರಿಸಿದವರಿಗೆ 2.5 ಕೋಟಿ ರು. ಬಹುಮಾನವನ್ನೂ ಘೋಷಿಸಿದೆ. ಜೊತೆಗೆ ಬಜೆಟ್ ಅಧಿವೇಶನದ ವೇಳೆ ಸಂಸತ್ತಿಗೆ ಮುತ್ತಿಗೆ ಹಾಕುವಂತೆಯೂ ಪ್ರತಿಭಟನಾಕಾರರಿಗೆ ಕರೆ ನೀಡಿದೆ.
ಸಿಖ್ ಫಾರ್ ಜಸ್ಟೀಸ್ ಸಂಘಟನೆಗೆ ಭಾರತ ನಿಷೇಧ ಹೇರಿದೆ. ಆದರೆ ಇದು ಈಗ ಅಮೆರಿಕದ ನ್ಯೂಯಾರ್ಕ್ನಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಅಲ್ಲಿಂದಲೇ ಕಾರ್ಯಾಚರಣೆ ನಡೆಸುತ್ತಿದೆ. ಪಂಜಾಬನ್ನು ಭಾರತದಿಂದ ವಿಭಜಿಸಿ ಪ್ರತ್ಯೇಕ ಖಲಿಸ್ತಾನ ಸ್ಥಾಪನೆ ಮಾಡಬೇಕು ಎಂಬುದು ಸಂಘಟನೆಯ ಧ್ಯೇಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ