
ನವದೆಹಲಿ(ಫೆ.11): ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆಡಳಿತಾರೂಢ ಆಪ್ ಮುನ್ನಡೆ ಕಾಯ್ದುಕೊಂಡಿದೆ. ಇದುವರೆಗೂ ಬಂದ ಅಂಕಿ ಅಂಶಗಳ ಪ್ರಕಾರ ಆಪ್ 59, ಬಿಜೆಪಿ 11, ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.
ಇನ್ನು ದೆಹಲಿ ಸೋಲಿಗೆ ಕಾರಣ ತಿಳಿಸಿರುವ ಕಾಂಗ್ರೆಸ್ ನಾಯಕಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಗಳು ಶರ್ಮಿಷ್ಠ ಮುಖರ್ಜಿ, ಹೈಕಮಾಂಡ್ ಮಟ್ಟದಲ್ಲಿ ನಿರ್ಧಾರ ಮಾಡುವುದರಲ್ಲಿ ಆದ ವಿಳಂಬವೇ ಈ ಶೂನ್ಯ ಫಲಿತಾಂಶಕ್ಕೆ ಕಾರಣ ಎಂದು ವಿಶ್ಲೇಷಿಸಿದ್ದಾರೆ.
ಚುನಾವಣಾ ಸೋಲು: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಛೋಪ್ರಾ ರಾಜೀನಾಮೆ!
ಈ ಕುರಿತು ಟ್ವೀಟ್ ಮಾಡಿರುವ ಶರ್ಮಿಷ್ಠ ಮುಖರ್ಜಿ, ದೆಹಲಿಯಲ್ಲಿ ನಾವು ಮತ್ತೆ ನಾಶ ಹೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆತ್ಮಾವಲೋಕನ ಮಾಡಿಕೊಳ್ಳುವುದು ಸಾಕು, ಇನ್ನೇನಿದ್ದರೂ ಕಾರ್ಯಪ್ರವೃತ್ತವಾಗಬೇಕು ಎಂದು ಶರ್ಮಿಷ್ಠ ಮುಖರ್ಜಿ ಮಾರ್ಮಿಕವಾಗಿ ಹೇಳಿದ್ದಾರೆ.
ಕಾಂಗ್ರೆಸ್ನ್ನು ಕಂಗಾಲು ಮಾಡಿದ ದೆಹಲಿ: ಕೈ ಸೋಲಿಗೆ ಕಾರಣಗಳಿವೆ ಇಲ್ಲಿ!
ಉನ್ನತ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವಲ್ಲಿ ಅತಿಯಾದ ವಿಳಂಬ, ರಾಜ್ಯ ಮಟ್ಟದಲ್ಲಿ ಕಾರ್ಯತಂತ್ರದ ಮತ್ತು ಒಗ್ಗಟ್ಟಿನ ಕೊರತೆ, ನಿರುತ್ಸಾಹಿ ಕಾರ್ಯಕರ್ತರು, ಇವೆಲ್ಲವೂ ಚುನಾವಣಾ ಫಲಿತಾಂಶ ಸೋಲಿಗೆ ಕಾರಣ ಎಂದು ಶರ್ಮಿಷ್ಠ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ