ಪ್ರಧಾನಿ ಮೋದಿ ಹೊಗಳಿ ರಾಹುಲ್ ಗಾಂಧಿ ನಾಯಕತ್ವ ಎಕ್ಸ್‌ಪೋಸ್ ಮಾಡಿದ ಶಶಿ ತರೂರ್

Published : Jun 24, 2025, 03:42 PM IST
Shashi Tharoor

ಸಾರಾಂಶ

ಪ್ರಧಾನಿ ಮೋದಿ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಇದೀಗ ರಾಹುಲ್ ಹಾಗೂ ಕಾಂಗ್ರೆಸ್ ನಾಯಕತ್ವವನ್ನೇ ಪ್ರಶ್ನಿಸಿದ್ದಾರೆ. ಅಷ್ಟಕ್ಕೂ ಶಶಿ ತರೂರ್ ಹೇಳಿದ್ದೇನು?

ನವದೆಹಲಿ (ಜೂ. 24) ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕತ್ವವನ್ನು ಬಯಲು ಮಾಡಿದ್ದಾರೆ. ಶಶಿ ತರೂರ್ ಬರೆದ ಲೇಖನದಲ್ಲಿ ಮೋದಿ ನಾಯಕತ್ವ, ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಸಿಗುತ್ತಿರುವ ಮನ್ನಣೆಯನ್ನು ಹೊಗಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿಗೆ ಜೊತೆಯಾಗಿ ನಿಲ್ಲಬೇಕಿದೆ ಎಂದು ಶಶಿ ತರೂರ್ ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹಾಗೂ ರಾಹುಲ್ ಕಾಂಧಿ ನಾಯಕತ್ವ ಕುರಿತು ಶಶಿ ತರೂರ್ ಕೆಲ ಪ್ರಶ್ನೆಗಳನ್ನು ಎತ್ತಿತ್ತಿದ್ದಾರೆ.

ಕಾಂಗ್ರೆಸ್ ನಾಯಕತ್ವ ಬದಲಾಗಬೇಕು

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ (Assembly Election Results 2022) ಕಾಂಗ್ರೆಸ್‌ (Congress) ಸೋಲಿನ ಬಳಿಕ ಪಕ್ಷದೊಳಗೆ ಭಿನ್ನಮತ ಭುಗಿಲೆದ್ದಿದೆ. ತಿರುವನಂತಪುರಂ ಸಂಸದ ಶಶಿ ತರೂರ್ (Shashi Tharoor) ಪಕ್ಷದ ನಾಯಕತ್ವವನ್ನ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಗೆಲ್ಲಬೇಕಾದ್ರೆ ಬದಲಾವಣೆ ಅನಿವಾರ್ಯ ಅಂತ ಟ್ವೀಟ್ ಮಾಡಿದ್ದಾರೆ. ಚುನಾವಣಾ ಸೋಲು ಕಾಂಗ್ರೆಸ್‌ನಲ್ಲಿ ನಂಬಿಕೆ ಇಟ್ಟವರೆಲ್ಲರಿಗೂ ನೋವು ತಂದಿದೆ ಅಂತ ತರೂರ್ ಹೇಳಿದ್ದಾರೆ. ದೇಶಕ್ಕೆ ಸ್ಪೂರ್ತಿ ತುಂಬುವ ಪಾಸಿಟಿವ್ ಅಜೆಂಡಾ ಬೇಕು ಅಂತ ಕಾಂಗ್ರೆಸ್ ಅರ್ಥ ಮಾಡ್ಕೋಬೇಕು ಅಂತಲೂ ಹೇಳಿದ್ದಾರೆ. ಪಕ್ಷದ ನಾಯಕತ್ವ ಬದಲಾವಣೆ ಆಗಬೇಕು ಅಂತ ತರೂರ್ ಪರೋಕ್ಷವಾಗಿ ಹೇಳಿದ್ದಾರೆ.

ಇದಕ್ಕೂ ಮೊದಲು ಹಿಂದೂ ಮಾಧ್ಯಮದಲ್ಲಿ ಲೇಖನ ಬರೆದ ಶಶಿ ತರೂರ್, ಪ್ರಧಾನಿ ಮೋದಿ ನಾಯಕತ್ವವನ್ನು ಹೊಗಳುವ ಮೂಲಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಬದಲಾಗಬೇಕಿದೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕತ್ವ ಮಾಡುತ್ತಿರುವ ಪ್ರಮುಖ ತಪ್ಪುಗಳ ಕುರಿತು ಶಶಿ ತರೂರ್ ಬೆಳಕು ಚೆಲ್ಲಿದ್ದಾರೆ.

ಜಾಗತಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ ಪ್ರಮುಖ ಶಕ್ತಿಯಾಗಿ ಬೆಳೆದಿದ್ದಾರೆ. ಮೋದಿ ಶಕ್ತಿ, ಚೈತನ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ ರೀತಿಯಿಂದ ಜಗತ್ತೇ ಮಚ್ಚಿಕೊಂಡಿದೆ. ಜಾಗತಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾರತಕ್ಕೆ ಪ್ರಮುಖ ಶಕ್ತಿಯಾಗಿದೆ. ಮೋದಿಗೆ ಉತ್ತಮ ಬೆಂಬಲ ನೀಡಬೇಕು ಎಂದು ಶಶಿ ತರೂರ್ ತಮ್ಮ ಲೇಖನದಲ್ಲಿ ಹೇಳಿದ್ದಾರೆ. ಆಪರೇಶನ್ ಸಿಂದೂರ್ ಬಳಿಕ ಭಾರತ ಒಂದೇ ಧ್ವನಿಯಿಂದ ವಿಶ್ವದ ಮುಂದೆ ಪಾಕಿಸ್ತಾನ ನಾಟಕ ಬಯಲು ಮಾಡಿತ್ತು. ಸ್ಪಷ್ಟವಾಗಿ ಜಾಗತಿಕ ವೇದಿಕೆಗೆ ಒಂದೇ ಧ್ವನಿಯಲ್ಲಿ ತಿಳಿಸುವ ಈ ವಿಧಾನ ಪರಿಣಾಮಕಾರಿಯಾಗಿತ್ತು. ಸ್ಪಷ್ಟ ನಿಲುವು ಹಾಗೂ ಭಾರತವನ್ನು ಒಗ್ಗಟ್ಟಾಗಿ ಪ್ರತಿನಿಧಿಸುವ ನಾಯಕರಿಂದ ಸಾಧ್ಯ ಎಂದ ಶಶಿ ತರೂರ್ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್