ಭಾರತದಲ್ಲಿ ಹಸೀನಾ ತೆಪ್ಪಗಿರಬೇಕು: ಮುಹಮ್ಮದ್‌ ಯೂನಸ್‌ ಎಚ್ಚರಿಕೆ

Published : Sep 06, 2024, 08:01 AM IST
ಭಾರತದಲ್ಲಿ ಹಸೀನಾ ತೆಪ್ಪಗಿರಬೇಕು:  ಮುಹಮ್ಮದ್‌ ಯೂನಸ್‌ ಎಚ್ಚರಿಕೆ

ಸಾರಾಂಶ

ಭಾರತದಲ್ಲಿ ಕುಳಿತುಕೊಂಡು ಮಾಜಿ ಪ್ರಧಾನಿ ಶೇಖ್‌ ಹಸೀನಾ ಬಾಂಗ್ಲಾದೇಶದಲ್ಲಿ ರಾಜಕೀಯ ಹೇಳಿಕೆ ನೀಡುವುದು ಸ್ನೇಹಮಯಿ ವರ್ತನೆಯಲ್ಲ ಎಂದು ಬಾಂಗ್ಲಾದೇಶದ ನೂತನ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್‌ ಯೂನಸ್‌ ಅವರು ಸಲಹೆ ಮಾಡಿದ್ದಾರೆ.

ಢಾಕಾ (ಸೆ.6): ಭಾರತದಲ್ಲಿ ಕುಳಿತುಕೊಂಡು ಮಾಜಿ ಪ್ರಧಾನಿ ಶೇಖ್‌ ಹಸೀನಾ ಬಾಂಗ್ಲಾದೇಶದಲ್ಲಿ ರಾಜಕೀಯ ಹೇಳಿಕೆ ನೀಡುವುದು ಸ್ನೇಹಮಯಿ ವರ್ತನೆಯಲ್ಲ. ನಾವು ಭಾರತದ ಎದುರು ಗಡೀಪಾರು ಬೇಡಿಕೆ ಇಡುವವರೆಗೂ ಹಸೀನಾ ಅವರು ಮೌನವಾಗಿರಬೇಕು. ತನ್ಮೂಲಕ ಎರಡೂ ದೇಶಗಳಿಗೆ ಇರುಸುಮುರುಸಾಗುವುದನ್ನು ತಡೆಯಬೇಕು ಎಂದು ಬಾಂಗ್ಲಾದೇಶದ ನೂತನ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್‌ ಯೂನಸ್‌ ಅವರು ಸಲಹೆ ಮಾಡಿದ್ದಾರೆ.

ಹಸೀನಾ ಭಾರತದಲ್ಲಿದ್ದುಕೊಂಡು ಕೆಲವು ಬಾರಿ ಮಾತನಾಡುತ್ತಿದ್ದಾರೆ. ಇದು ಸಮಸ್ಯೆಗೆ ಕಾರಣವಾಗುತ್ತಿದೆ. ಆಕೆ ಮೌನದಿಂದ ಇದ್ದರೆ, ಒಳ್ಳೆಯದು. ಭಾರತದಲ್ಲಿ ಕುಳಿತು ಮಾತನಾಡುವುದು, ನಿರ್ದೇಶನಗಳನ್ನು ನೀಡುವುದನ್ನು ಯಾರೂ ಇಷ್ಟಪಡುವುದಿಲ್ಲ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಬಾಂಗ್ಲಾದ ಶೇಖ್ ಹಸೀನಾ ಭಾರತ ಬಿಟ್ಟು ಹೋಗ್ತಾರಂತೆ! ಎಲ್ಲಿಗೆ ಹೋಗ್ತಾರೆ

ಆ.15ರಂದು ಬಾಂಗ್ಲಾ ತೊರೆದ ಹಸೀನಾ ಅವರು ಆ.13ರಂದು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಕೆಲವರು ಭಯೋತ್ಪಾದಕ ದಾಳಿ ನಡೆಸಿದ್ದಾರೆ. ಅವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದರು.

ಭಾರತ ಬಿಂಬಿಸುವಂತೆ ಹಿಂದೂಗಳ ಮೇಲೆ ದಾಳಿ ನಡೆದಿಲ್ಲ:

ಶೇಖ್‌ ಹಸೀನಾ ಪಲಾಯನ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆದ ದಾಳಿಗಳ ಬಗ್ಗೆ ಉತ್ಪ್ರೇಕ್ಷೆ ಮಾಡಲಾಗಿದೆ. ಈ ದಾಳಿಗಳು ನಡೆದಿದ್ದು ಕೋಮು ವಿಚಾರಕ್ಕೆ ಅಲ್ಲ. ರಾಜಕೀಯ ಕಾರಣಕ್ಕೆ. ಭಾರತ ಬಿಂಬಿಸುತ್ತಿರುವಂತೆ ದಾಳಿಗಳು ಆಗಿಲ್ಲ ಎಂದು ಬಾಂಗ್ಲಾ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್‌ ಯೂನಸ್‌ ಅವರು ಹೇಳಿದ್ದಾರೆ.

ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಸರ್ಕಾರವನ್ನು ಬೆಂಬಲಿಸಿದ್ದಾರೆ ಎಂಬ ಕಾರಣಕ್ಕೆ ಹಿಂದುಗಳ ಮೇಲೆ ಬಾಂಗ್ಲಾದಲ್ಲಿ ದಾಳಿ ನಡೆಸಲಾಗಿದೆ. ಅವಾಮಿ ಲೀಗ್‌ ಬೆಂಬಲಿಗರೆಂದರೆ ಹಿಂದುಗಳು ಎಂಬ ಭಾವನೆ ದೇಶದಲ್ಲಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ. ಇದನ್ನು ಸರಿ ಎಂದು ನಾನು ಹೇಳುವುದಿಲ್ಲ. ಆದರೂ ಭಾರತ ಇದನ್ನು ದೊಡ್ಡದಾಗಿ ಬಿಂಬಿಸುತ್ತಿದೆ. ನಾವೇನು ಮಾಡಲಾಗದು ಎಂದು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಹಿಂದೂ ಶಿಕ್ಷಕರಡಿ ಮುಸ್ಲಿಂ ಮಕ್ಕಳು ಓದೋದು ಬೇಡ: 49 ಟೀಚರ್‌ಗಳಿಂದ ಬಲವಂತವಾಗಿ ರಾಜೀನಾಮೆ ಪಡೆದ್ರೂ ತುಟಿ ಬಿಚ್ಚದ ಜಾತ್ಯಾತೀತರು!

ಇದೇ ವೇಳೆ, ಶೇಖ್‌ ಹಸೀನಾ ಇಲ್ಲದ ಕಾರಣ ಬಾಂಗ್ಲಾದೇಶವು ಮತ್ತೊಂದು ಅಪಘಾನಿಸ್ತಾನವಾಗಿಬಿಡಲಿದೆ ಎಂಬ ಅಭಿಪ್ರಾಯ ಪ್ರಸರಣವನ್ನು ಭಾರತ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು