ಉದ್ಧವ್ ಸಿಎಂ, ಬಾಳಾಸಾಹೇಬ್, ಪಾಟೀಲ್ ಡಿಸಿಎಂ: ಸರ್ಕಾರಕ್ಕೆ ಸಿದ್ಧರಾದ ಸರದಾರರು!

Published : Nov 26, 2019, 04:57 PM IST
ಉದ್ಧವ್ ಸಿಎಂ, ಬಾಳಾಸಾಹೇಬ್, ಪಾಟೀಲ್ ಡಿಸಿಎಂ: ಸರ್ಕಾರಕ್ಕೆ ಸಿದ್ಧರಾದ ಸರದಾರರು!

ಸಾರಾಂಶ

ಅಂತ್ಯ ಕಂಡ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ| ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ| ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ ಶೀವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ| ರ್ಕಾರ ರಚನೆಯ ರೂಪುರೇಷೆ ಸಿದ್ಧಪಡಿಸುವಲ್ಲಿ ಬ್ಯುಸಿಯಾದ ಮೈತ್ರಿಕೂಟ| ಶಿವಸೇನೆಯ ಉದ್ಧವ್ ಠಾಕ್ರೆಗೆ ಐದು ವರ್ಷಗಳ ಕಾಲ ಸಿಎಂ ಪಟ್ಟ| ಕಾಂಗ್ರೆಸ್’ನಿಂದ ಬಾಳಾಸಾಹೇಬ್ ಥೋರಟ್ ಡಿಸಿಎಂ| ಎನ್’ಸಿಪಿಯಿಂದ ಜಯಂತ್ ಪಾಟೀಲ್’ಗೆ ಡಿಸಿಎಂ ಹುದ್ದೆ| ಮೈತ್ರಿಕೂಟದ ಹೆಗಲೇರಿದ ಮಂತ್ರಿ ಮಂಡಲ ರಚನೆಯ ಕಸರತ್ತು|

ಮುಂಬೈ(ನ.26): ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ ಕೊನೆಗೂ ಅಂತ್ಯ ಕಂಡಿದ್ದು, ಬಹುಮತ ಸಾಬೀತು ಮಾಡಲಾಗದ ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾತೋಶ್ರೀ ಸಂಬಂಧಕ್ಕೆ ಇತಿಶ್ರೀ: ರಾಜೀನಾಮೆ ನೀಡಿದ ಫಡ್ನವೀಸ್ ಹೇಳಿದ್ದಿಷ್ಟು!

ಈ ಮಧ್ಯೆ ತಮ್ಮದೇ ಸರ್ಕಾರ ಪಕ್ಕಾ ಎಂದರಿತ ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ, ಸರ್ಕಾರ ರಚನೆಯ ರೂಪುರೇಷೆ ಸಿದ್ಧಪಡಿಸುವಲ್ಲಿ ಬ್ಯುಸಿಯಾಗಿದೆ.

ಈಗಾಗಲೇ ಉದ್ಧವ್ ಠಾಕ್ರೆ ಐದು ವರ್ಷಗಳ ಕಾಲ ಸಿಎಂ ಆಗುವುದು ಪಕ್ಕಾ ಆಗಿದ್ದು, ಕಾಂಗ್ರೆಸ್’ನ ಬಾಳಾಸಾಹೇಬ್ ಥೋರಟ್ ಹಾಗೂ ಎನ್’ಸಿಪಿಯ ಜಯಂತ್ ಪಾಟೀಲ್ ಅವರಿಗೆ ಡಿಸಿಎಂ ಹುದ್ದೆ ಬಹುತೇಕ ಖಚಿತವಾಗಿದೆ.

ಬಿಜೆಪಿಗೆ ಸೆಟ್ ಬ್ಯಾಕ್: ರಾಜೀನಾಮೆ ನೀಡಿ ಅಜಿತ್ ಪವಾರ್ ಕಮ್ ಬ್ಯಾಕ್!

ನಾಳೆ(ನ.27)ಯೇ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಹುಮತ ಸಾಬೀತಿಗೆ ಎರಡು ದಿನಗಳ ಕಾಲಾವಕಾಶ ಸಿಗುವುದು ನಿಚ್ಚಳವಾಗಿದೆ.

ಫಡ್ನವೀಸ್‌ಗೆ 'ಮಹಾ' ಪರೀಕ್ಷೆ: ನಾಳೆಯೇ ಬಹುಮತ ಸಾಬೀತುಪಡಿಸಿ, ರಹಸ್ಯ ಮತದಾನ ಬೇಡ: ಸುಪ್ರೀಂ

ಠಾಕ್ರೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಂತ್ರಿ ಮಂಡಲ ರಚನೆಯ ಕಸರತ್ತು ಆರಂಭವಾಗಲಿದ್ದು, ಭಿನ್ನಮತಕ್ಕೆ ಆಸ್ಪದವಿಲ್ಲದಂತೆ ಮಂತ್ರಿ ಮಂಡಲ ರಚಿಸುವ ಜವಾಬ್ದಾರಿ ಮೂರೂ ಪಕ್ಷಗಳ ಹೆಗಲೇರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!