ಜನಾದೇಶಕ್ಕೆ ಶಿವಸೇನೆ ಅವಮಾನ ಮಾಡಿದೆ: ಅಮಿತ್ ಶಾ

Published : Nov 28, 2019, 07:52 AM ISTUpdated : Nov 28, 2019, 08:16 AM IST
ಜನಾದೇಶಕ್ಕೆ ಶಿವಸೇನೆ ಅವಮಾನ ಮಾಡಿದೆ: ಅಮಿತ್ ಶಾ

ಸಾರಾಂಶ

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ| ದೇವೇಂದ್ರ ಫಡ್ನವೀಸ್ ರಾಜೀನಾಮೆ| ಸರ್ಕಾರ ರಚಿಸಲು ಠಾಕ್ರೆ ಸಿದ್ಧ| ಶಿವಸೇನೆಯಿಂದ ಜನಾದೇಶಕ್ಕೆ ಅವಮಾನ: ಶಾ

ನವದೆಹಲಿ[ನ.28]: ‘ಮಹಾರಾಷ್ಟ್ರದಲ್ಲಿ ಅಧಿಕಾರ ಕಬಳಿಸುವ ಒಂದೇ ಉದ್ದೇಶದಿಂದ ಪರಸ್ಪರ ವಿರುದ್ಧ ರಾಜಕೀಯ ಸಿದ್ಧಾಂತ ಹೊಂದಿರುವ ಪಕ್ಷಗಳು ಒಂದಾಗಿವೆ. ಜನಾದೇಶವನ್ನು ಧಿಕ್ಕರಿಸಿ ಅವು ಅಧಿಕಾರಕ್ಕೆ ಬಂದಿವೆ’ ಎಂದು ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ.

ಅವ್ರೂ ಬರ್ಲಿ: ಪ್ರಮಾಣವಚನಕ್ಕೆ ಮೋದಿ, ಶಾಗೂ ಆಮಂತ್ರಣ ಇರ್ಲಿ!

‘ರಿಪಬ್ಲಿಕ್‌’ ಟೀವಿ ವಾಹಿನಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಜನತೆ ಬಿಜೆಪಿ-ಶಿವಸೇನೆಗೆ ಸ್ಪಷ್ಟಜನಾದೇಶ ನೀಡಿದ್ದರು. ಆದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಒಂದಾಗಿವೆ’ ಎಂದರು.

‘ಮುಖ್ಯಮಂತ್ರಿ ಸ್ಥಾನ ನಿಮಗೇ ನೀಡುತ್ತೇವೆ ಎಂದು ಹೇಳಿ ಬೆಂಬಲ ನೀಡುವುದು ಕುದುರೆ ವ್ಯಾಪಾವಲ್ಲವೇ?’ ಎಂದವರು ಪ್ರಶ್ನಿಸಿದರು. ಇದೇ ವೇಳೆ, ‘ಶಿವಸೇನೆಗೆ ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ನಾನು ಯಾವುದೇ »ವಚನ ನೀಡಿರಲಿಲ್ಲ’ ಎಂದು ಪುನರುಚ್ಚರಿಸಿದರು.

ಮಹಾರಾಷ್ಟ್ರ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ: ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!