ಖಾತೆ ಅಸಮಾಧಾನ: ಸರ್ಕಾರದಿಂದ ಹೊರನಡೆದ ಶಿವಸೇನೆ ಶಾಸಕ!

Suvarna News   | Asianet News
Published : Jan 04, 2020, 05:24 PM IST
ಖಾತೆ ಅಸಮಾಧಾನ: ಸರ್ಕಾರದಿಂದ ಹೊರನಡೆದ ಶಿವಸೇನೆ ಶಾಸಕ!

ಸಾರಾಂಶ

ಶುರುವಾಯಿತು ಭಿನ್ನಮತದ ಪರ್ವ| ಖಾತೆ ಅಸಮಾಧಾನದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ| ಸಚಿವ ಸ್ಥಾನ ತ್ಯಜಿಸಿ ಹೊರನಡೆದ ಶಾಸಕ| ಮಹಾರಾಷ್ಟ್ರ ಸರ್ಕಾರಕ್ಕೆ ಸಂಪುಟ ವಿಸ್ತರಣೆ ಸಂಕಷ್ಟ| ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಸೇನೆಯ ಆಬ್ದುಲ್ ಸತ್ತಾರ್|  ಸಂಪುಟ ದರ್ಜೆಯ ಸಚಿವ ಸ್ಥಾನ ನೀಡದ್ದಕ್ಕೆ ಅಬ್ದುಲ್ ಸತ್ತಾರ್ ಅಸಮಾಧಾನ| ಅಬ್ದುಲ್ ಸತ್ತಾರ್ ಮನವೋಲಿಕೆಯ ಕಸರತ್ತಿನಲ್ಲಿ ತೊಡಗಿರುವ ಶಿವಸೇನೆ|

ಮುಂಬೈ(ಜ.04): ಎಲ್ಲಾ ಬಿಕ್ಕಟ್ಟುಗಳನ್ನು ಬಗೆಹರಿಸಿ ಈಗಷ್ಟೇ ಕಣ್ಣು ಬಿಟ್ಟಿದ್ದ ಮಹಾರಾಷ್ಟ್ರ ಸರ್ಕಾರಕ್ಕೆ, ಸಚಿವ ಸಂಪುಟ ವಿಸ್ತರಣೆ ಸಂಕಷ್ಟ ತಂದಿಟ್ಟಿದೆ.

ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆಯೇ ಶಿವಸೇನೆಗೆ ಮಹಾ ಹಿನ್ನಡೆ ಉಂಟಾಗಿದ್ದು, ಸಂಪುಟ ದರ್ಜೆಯ ಸಚಿವ ಸ್ಥಾನ ನೀಡದ ಕಾರಣಕ್ಕೆ ಶಾಸಕ ಅಬ್ದುಲ್ ಸತ್ತಾರ್ ರಾಜೀನಾಮೆ ನೀಡಿದ್ದಾರೆ. 

ಸಂಪುಟ ವಿಸ್ತರಣೆ ವೇಳೆ ಅಬ್ದುಲ್ ಸತ್ತಾರ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಮಹತ್ವದ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಸತ್ತಾರ್, ಅಸಮಾಧಾನಗೊಂಡು ಪಕ್ಷ ತ್ಯಜಿಸಿದ್ದಾರೆ.  

ಸಂಪುಟ ದರ್ಜೆ ಸಚಿವ ಸ್ಥಾನ ನೀಡುವ ಬಗ್ಗೆ ಉದ್ಧವ್ ಠಾಕ್ರೆ ಭರವಸೆ ನೀಡಿದ್ದರು. ಆದರೆ ರಾಜ್ಯ ಖಾತೆ ನೀಡಿದ್ದಾರೆ. ಹೀಗಾಗಿ ಸರ್ಕಾರದಿಂದ ಹೊರನಡೆಯುತ್ತಿರುವುದಾಗಿ ಅಬ್ದುಲ್ ಸತ್ತಾರ್ ಹೇಳಿದ್ದಾರೆ. 

ಅಜಿತ್‌ ಪವಾರ್‌ಗೆ ಮತ್ತೆ ಡಿಸಿಎಂ ಪಟ್ಟ, ಠಾಕ್ರೆ ಪುತ್ರ ಮಂತ್ರಿ!

ಸದ್ಯ ಅಬ್ದುಲ್ ಸತ್ತಾರ್ ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶಿವಸೇನೆ ಅವರ ರಾಜೀನಾಮೆಯನ್ನು ಸ್ವೀಕರಿಸಿಲ್ಲ. ಅಲ್ಲದೇ ಸತ್ತಾರ್ ಅವರನ್ನು ಮನವೋಲಿಸುವ ಕಸರತ್ತು ಮುಂದುವರೆದಿದೆ.

ವಿಧಾನಸಭೆ ಚುನಾವಣೆಗೂ ಮೊದಲು ಅಬ್ದುಲ್ ಸತ್ತಾರ್ ಕಾಂಗ್ರೆಸ್ ತ್ಯಜಿಸಿ ಶಿವಸೇನೆ ಸೇರಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!