ಶೆಟ್ಟಿಗಳಿಗೆ ಮುಂಬೈನಲ್ಲಿ ಆಹಾರ ಪೂರೈಕೆ ಗುತ್ತಿಗೆ : ಸೇನೆ ಶಾಸಕ ಕ್ಯಾತೆ

Kannadaprabha News   | Kannada Prabha
Published : Jul 11, 2025, 05:19 AM IST
Sanjay Gaikwad

ಸಾರಾಂಶ

ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಇದೀಗ ಕರ್ನಾಟಕದ ಶೆಟ್ಟಿ ಸಮುದಾಯ ಮತ್ತು ದಕ್ಷಿಣ ಭಾರತೀಯರ ವಿರುದ್ಧ ಕೀಳು ಹೇಳಿಕೆ ನೀಡಿದ್ದಾರೆ. ಶೆಟ್ಟಿಗಳಿಗೇಕೆ ಮುಂಬೈನಲ್ಲಿ ಆಹಾರ ಪೂರೈಸುವ ಗುತ್ತಿಗೆ ನೀಡುತ್ತೀರಿ. ಅದನ್ನು ಮರಾಠಿಗರಿಗೆ ನೀಡಿ ಎಂದು ಹೇಳಿದ್ದಾರೆ.

ಮುಂಬೈ: ಹಳಸಿದ್ದ ಆಹಾರ ಕೊಟ್ಟಿದ್ದಾರೆ ಎನ್ನುವ ಕಾರಣಕ್ಕೆ ಕ್ಯಾಂಟಿನ್ ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆಸಿದ್ದ ಮಹಾ ರಾಷ್ಟ್ರ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಇದೀಗ ಕರ್ನಾಟಕದ ಶೆಟ್ಟಿ ಸಮುದಾಯ ಮತ್ತು ದಕ್ಷಿಣ ಭಾರತೀಯರ ವಿರುದ್ಧ ಕೀಳು ಹೇಳಿಕೆ ನೀಡಿದ್ದಾರೆ.

ಶೆಟ್ಟಿಗಳಿಗೇಕೆ ಮುಂಬೈನಲ್ಲಿ ಆಹಾರ ಪೂರೈಸುವ ಗುತ್ತಿಗೆ ನೀಡುತ್ತೀರಿ. ಅದನ್ನು ಮರಾಠಿಗರಿಗೆ ನೀಡಿ ಎಂದು ಹೇಳಿದ್ದಾರೆ.

ಕ್ಯಾಂಟೀನ್‌ ಸಿಬ್ಬಂದಿ ಹಲ್ಲೆ ಪ್ರಕರಣ ಟೀವಿ ವಾಹಿನಿಯೊಂದರ ಜೊತೆ ಮಾತನಾಡಿದ ಗಾಯಕ್ವಾಡ್‌, ‘ದಕ್ಷಿಣ ಭಾರತೀಯರು ಇಲ್ಲಿ ಡಾನ್ಸ್‌ ಬಾರ್‌, ಲೇಡಿಸ್‌ ಬಾರ್‌ ನಡೆಸುವ ಮೂಲಕ ಮಹಾರಾಷ್ಟ್ರದ ಸಂಸ್ಕೃತಿಯನ್ನು ಹಾಳುಗೆಡವಿದ್ದಾರೆ. ಅವರು ನಮ್ಮ ಮಕ್ಕಳನ್ನೆಲ್ಲಾ ಹಾಳು ಮಾಡಿದ್ದಾರೆ. ಅವರು ನಮಗೆ ಹೇಗೆ ಗುಣಮಟ್ಟದ ಆಹಾರ ಪೂರೈಸಲು ಸಾಧ್ಯ. ಶೆಟ್ಟಿ ಎಂಬ ಗುತ್ತಿಗೆದಾರನಿಗೆ ಇಲ್ಲಿ ಆಹಾರ ಪೂರೈಸುವ ಗುತ್ತಿಗೆ ನೀಡಿದ್ದಾದರೂ ಏಕೆ? ಅದರ ಬದಲು ಅದನ್ನು ಸ್ಥಳೀಯ ಮರಾಠಿ ಗುತ್ತಿಗೆದಾರನಿಗೆ ನೀಡಿ. ಅವನಿಗೆ ನಾವು ಏನು ತಿನ್ನುತ್ತೇವೆ ಎಂಬುದು ಗೊತ್ತಿರುತ್ತದೆ. ಆತ ಗುಣಮಟ್ಟದ ಆಹಾರ ಪೂರೈಸುತ್ತಾನೆ’ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಕ್ಯಾಂಟಿನ್ ಸಿಬ್ಬಂದಿ ಮೇಲಿನ ಹಲ್ಲೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದರೂ ಕ್ಷಮೆ ಯಾಚನೆ ಬದಲು, ನಾನು ಮಾಡಿದ್ದು ಸರಿಯಾಗಿದೆ. ಮಾರ್ಗ ಸರಿಯಲ್ಲದಿರಬಹುದು. ಆದರೆ ಅದು ಅಗತ್ಯವಾಗಿತ್ತು. ಅಗತ್ಯಬಿದ್ದರೆ ಇನ್ನೊಮ್ಮೆ ಕಪಾಳಮೋಕ್ಷ ಮಾಡುತ್ತೀನಿ ಎಂದು ಗಾಯಕ್ವಾಡ್‌ ಹೇಳಿದ್ದಾರೆ.ವಿವಾದ ಹೊಸದೇನಲ್ಲ:

ಗಾಯಕ್ವಾಡ್‌ ಈ ರೀತಿಯ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಹಿಂದೆಯೂ ಮಾತಿನಿಂದ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಈ ವರ್ಷದ ಜನವರಿಯಲ್ಲಿ ಮತದಾರರನ್ನು ವೇಶ್ಯೆಗೆ ಹೋಲಿಸಿದ್ದರು. ಜನರು ಮತ ಮಾರಿಕೊಳ್ಳುತ್ತಿದ್ದಾರೆ. ಹಾಗೆ ಮಾರಾಟವಾಗುವ ಮತದಾರರು ವೇಶ್ಯೆಯರಿಗಿಂತ ಕೆಟ್ಟವರು ಎಂದಿದ್ದರು. ಅದಕ್ಕೂ ಮುನ್ನ ಕಳೆದ ಸೆಪ್ಟೆಂಬರ್‌ನಲ್ಲಿ ರಾಹುಲ್ ಗಾಂಧಿಯನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿ ಸುದ್ದಿಯಾಗಿದ್ದರು.

  • ಮುಂಬೈನಲ್ಲಿ ಕ್ಯಾಂಟಿನ್‌ ಗುತ್ತಿಗೆ ಮರಾಠಿಗರಿಗೆ ಮಾತ್ರ ನೀಡಿ
  • ದಕ್ಷಿಣ ಭಾರತೀಯರು ಮುಂಬೈನಲ್ಲಿ ಡಾನ್ಸ್ ಬಾರ್‌ ನಡೆಸ್ತಾರೆ
  • ಅವರಿಂದಾಗಿ ಮಹಾರಾಷ್ಟ್ರದ ಸಂಸ್ಕೃತಿಗೆ ಹಾನಿಯಾಗಿದೆ
  • ವಿವಾದಿತ ಶಾಸಕನಿಂದ ಮತ್ತೊಂದು ವಿವಾದಾತ್ಮಕ ಹೇಳಿಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್