
ನವದೆಹಲಿ(ಡಿ.15): ‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ ರಾಹುಲ್ ಗಾಂಧಿ..’ ಎಂಬ ಹೇಳಿಕೆಗೆ ಮಹಾರಾಷ್ಟ್ರದ ಮಿತ್ರಪಕ್ಷ ಶಿವಸೇನೆ ಕೆಂಡಾಮಂಡಲವಾಗಿದೆ.
ಸಾವರ್ಕರ್ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದಿರುವ ಶಿವಸೇನೆ, ಸಾವರ್ಕರ್ ಕುರಿತು ಲಘುವಾಗಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ’!
ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರೂ ಅವರನ್ನು ನಾವು ಗೌರವಿಸುತ್ತೇವೆ. ಅದರಂತೆ ಸಾವರ್ಕರ್ ಹೆಸರು ರಾಷ್ಟ್ರದ ಹೆಮ್ಮೆಯಾಗಿದ್ದು, ಅವರನ್ನು ಅಪಮಾನಿಸಬೇಡಿ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ರೇಪ್ ಇನ್ ಇಂಡಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ಷಮೆಯಾಚಿಸುವಂತೆ ಬಿಜೆಪಿ ಆಗ್ರಹಿಸಿತ್ತು.
ಇದನ್ನು ತಳ್ಳಿ ಹಾಕಿದ್ದ ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆದ ಭಾರತ್ ಬಚಾವೋ ಸಮಾವೇಶದಲ್ಲಿ ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ. ನಾನು ಸತ್ಯ ಹೇಳಿದ್ದು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ