
ಮುಂಬೈ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಂಧುದುರ್ಗ ಜಿಲ್ಲೆಯ ಕೋಟೆಯೊಂದರಲ್ಲಿ ಲೋಕಾರ್ಪಣೆಗೊಂಡಿದ್ದ ಮರಾಠಾ ರಾಜ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಸೋಮವಾರ ಕುಸಿದುಬಿದ್ದ ಘಟನೆ ನಡೆದಿದೆ.
ಮಾಲ್ವಾನ್ನ ರಾಜ್ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 1 ಗಂಟೆಗೆ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ನೆಲಕ್ಕೆ ಉರುಳಿದೆ.
ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನದಿಂದ ಭಾರಿ ಮಳೆ, ಜೋರಾದ ಗಾಳಿ ಬೀಸುತ್ತಿದೆ. ಘಟನೆಗೆ ಇದು ಕಾರಣ ಎನ್ನಲಾಗಿದೆ. ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಘಟನೆಯ ಮಾಹಿತಿ ಪಡೆದಿದ್ದಾರೆ. ಈ ನಡುವೆ, ಪ್ರತಿಪಕ್ಷಗಳು ಕಳಪೆ ಕಾಮಗಾರಿ ಕಾರಣ ಕುಸಿದಿವೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಕಳೆದ ವರ್ಷ ಡಿ.4 ರಂದು ನೌಕಾಪಡೆಯ ದಿನದ ಪ್ರಯುಕ್ತ ಪ್ರತಿಮೆ ಅನಾವರಣಗೊಳಿಸಿದ್ದರು.
ನಾವು ಒಗ್ಗಟ್ಟಾಗದಿದ್ದರೆ ನಮ್ಮನ್ನ ಕತ್ತರಿಸಲಾಗುತ್ತೆ: ದೇಶದ ಜನತೆಗೆ ಯೋಗಿ ಸಂದೇಶ
ಇತ್ತೀಚೆಗೆ ಬಿಹಾರದಲ್ಲಿ ಸರಣಿ ಸೇತುವೆ ಕುಸಿದುಬಿದ್ದಿದ್ದವು, ಆಯೋಧ್ಯೆ ರಾಮಮಂದಿರ, ಸಂಸತ್ ಭವನ ಸೋರುವಿಕೆಯಿಂದ ವಿರೋಧ ಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದವು. ಸೇತುವೆ ಕಟ್ಟಲಾಗದ ಪ್ರಧಾನಿ ದೇಶವನ್ನು ಏಣು ಕಟ್ಟುತ್ತಾನೆ ಎಂದು ಕಟುವಾಗಿ ಟೀಕಿಸಿದ್ದರು. ಇದೀಗ ಛತ್ರಪತಿ ಶಿವಾಜಿ ಅವರ 35 ಅಡಿ ಪ್ರತಿಮೆ ಕುಸಿದುಬಿದ್ದಿರುವುದು ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ