ತರಕಾರಿ ತಳ್ಳುಗಾಡಿ ಕಾಲಿನಿಂದ ಒದ್ದ ಪೊಲೀಸ್ ಸಸ್ಪೆಂಡ್

Published : May 06, 2021, 05:05 PM ISTUpdated : May 06, 2021, 06:13 PM IST
ತರಕಾರಿ ತಳ್ಳುಗಾಡಿ ಕಾಲಿನಿಂದ ಒದ್ದ ಪೊಲೀಸ್ ಸಸ್ಪೆಂಡ್

ಸಾರಾಂಶ

ತರಕಾರಿ ತಳ್ಳುಗಾಡಿಯನ್ನು ಕಾಲಿನಿಂದ ಒದ್ದ ಪೊಲೀಸ್ | ಸ್ಟೇಷನ್ ಹೌಸ್ ಆಫೀಸರ್ ಕೆಲಸದಿಂದ ಸಸ್ಪೆಂಡ್

ಪಂಜಾಬ್(ಮೇ.06): ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿನಾರ್ ಗುಪ್ತಾ ಅವರು ಫಾಗ್ವಾರ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ನವದೀಪ್ ಸಿಂಗ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ನಗರದ ಬೀದಿ ವ್ಯಾಪಾರಿಗಳ ತರಕಾರಿ ಗಾಡಿಯನ್ನು ಒದೆಯುವ ನವದೀಪ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕಪುರ್ಥಾಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕನ್ವವರ್ಧೀಪ್ ಕೌರ್ ನವದೀಪ್ ಅವರು ಔಪಚಾರಿಕ ಅಮಾನತು ಆದೇಶಗಳನ್ನು ಹೊರಡಿಸಿದ್ದಾರೆ.

ವಿದೇಶಿ ವೈದ್ಯಕೀಯ ಸಲಕರಣೆ ಹಂಚಿಕೆ; ಪಾರದರ್ಶಕತೆ ಆರೋಪಕ್ಕೆ ಜರ್ಮನ್ ರಾಯಭಾರಿ ತಿರುಗೇಟು!

ಸರಾಯ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ತರಕಾರಿ ಮತ್ತು ಹಣ್ಣು ಮಾರಾಟಗಾರರ ಅಂಗಡಿಗಳು ಇದ್ದು, ಪೊಲೀಸರು ಕೋವಿಡ್ -19 ಮಾನದಂಡಗಳ ಉಲ್ಲಂಘನೆ ಬಗ್ಗೆ ಪರಿಶೀಲಿಸಲು ಹೋದಾಗ ಘಟನೆ ನಡೆದಿದೆ.

ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದನ್ನು ನೋಡಿ SHO ಕೋಪಗೊಂಡು ತಳ್ಳುಗಾಡಿ ಒದ್ದು ಉರುಳಿಸಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಪೊಲೀಸರ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು