
ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದ ಒಂದು ಘಟನೆಯು ಜನರನ್ನು ಬೆಚ್ಚಿಬೀಳಿಸಿದೆ. ಪರದೇಶಿಪುರ ಪ್ರದೇಶದ ಸುಗನಾ ದೇವಿ ಮೈದಾನದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಗಂಟೆಗಳ ಕಾಲ ಹೋರಾಡಿದ ನಂತರ ಆಕೆ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ವಿವರ
ಸಂತ್ರಸ್ತೆ ಓಪನ್ ಗ್ರೌಂಡ್ನಲ್ಲಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ಮಹಿಳೆಯ ದೇಹದಲ್ಲಿ ಹಲವಾರು ಗಾಯಗಳಾಗಿದ್ದು, ಆಕೆಯ ಬಟ್ಟೆಗಳು ಹರಿದಿದ್ದವು. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು. ಆರಂಭಿಕ ತನಿಖೆಯಲ್ಲಿ ಬಹಿರಂಗವಾದ ಸಂಗತಿಗಳನ್ನ ನೋಡಿ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ.
ಅಂದಹಾಗೆ ಮಹಿಳೆಯ ಖಾಸಗಿ ಭಾಗಗಳ ಬಳಿ "ನಾನು ಕುಡಿದಿದ್ದೇನೆ, ದೂರ ಇರಿ" ಎಂದು ಬರೆಯಲಾದ ಹಚ್ಚೆ ಪೊಲೀಸ್ ತನಿಖೆಯಲ್ಲಿ ಪ್ರಮುಖ ಅಂಶವಾಗಿದೆ.
ಆ ಮಹಿಳೆಯ ಮೇಲೆ ಅತ್ಯಾ*ಚಾರ ನಡೆದಿದೆಯೇ?
ಪೊಲೀಸರ ಪ್ರಕಾರ, ಪರದೇಶಿಪುರ ಡಿವೈಡರ್ ಬಳಿಯ ಸುಗನಾ ದೇವಿ ಮೈದಾನದಲ್ಲಿ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಕೆಯ ದೇಹದ ಮೇಲಿನ ಗಾಯಗಳು ಮತ್ತು ಸುತ್ತಮುತ್ತಲಿನ ಪರಿಸರ ನೋಡಿದರೆ ಆಕೆಗೆ ಏನೋ ಸಂಭವಿಸಿರಬಹುದು ಎಂದು ಸೂಚಿಸುತ್ತದೆ. ಪೊಲೀಸರು ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ ಮತ್ತು ಹತ್ತಿರದ ಜನರನ್ನು ಪ್ರಶ್ನಿಸಲು ಪ್ರಾರಂಭಿಸಿದ್ದಾರೆ.
ಮಹಿಳೆಯ ದೇಹದ ಮೇಲೆ "ನಾನು ಕುಡಿದಿದ್ದೇನೆ, ದೂರವಿರಿ" ಎಂದು ಬರೆದಿರುವ ಹಚ್ಚೆ ಈ ಪ್ರಕರಣದ ಅತ್ಯಂತ ಶಾಕಿಂಗ್ ಅಂಶವೆಂದು ಪರಿಗಣಿಸಲಾಗಿದೆ. ಹಚ್ಚೆಯ ಹಿಂದಿನ ಉದ್ದೇಶ ಮತ್ತು ಅದರ ಸಂದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಗನಾ ದೇವಿ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶವು ಬಹಳ ಹಿಂದಿನಿಂದಲೂ ಮಾದಕ ವ್ಯಸನಿಗಳಿಗೆ ಆಶ್ರಯ ತಾಣವಾಗಿದೆ ಮತ್ತು ಹಲವಾರು ಬಾರಿ ದೂರುಗಳು ದಾಖಲಾಗಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಾರೆ.
ಈ ಮಹಿಳೆ ಯಾರು?
ಪೊಲೀಸರ ಪ್ರಕಾರ, ಆ ಮಹಿಳೆ ಮೂರು ಮಕ್ಕಳ ತಾಯಿ. ಆದರೆ ಆಕೆಯ ಕುಟುಂಬದಿಂದ ಯಾರೂ ಇದುವರೆಗೂ ಮುಂದೆ ಬಂದಿಲ್ಲ. ಇದಲ್ಲದೆ, ಆಕೆಯ ಹೆಸರು ಈ ಹಿಂದೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ದಾಖಲಾಗಿದೆ. ಆದ್ದರಿಂದ ಹಿಂದಿನ ದಾಖಲೆಯ ಬಗ್ಗೆಯೂ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಮಹಿಳೆ ಕೆಲವು ಮಾದಕ ದ್ರವ್ಯ ಬಳಕೆದಾರರೊಂದಿಗೆ ಸಂಪರ್ಕ ಹೊಂದಿದ್ದಳು ಎಂದು ವರದಿಯಾಗಿದೆ.
ಡಿಸಿಪಿ ಕುಮಾರ್ ಪ್ರತೀಕ್ ಹೇಳಿದ್ದೇನು?
ಈ ಬಗ್ಗೆ ಮಾಹಿತಿ ನೀಡಿದ ಡಿಸಿಪಿ ಕುಮಾರ್ ಪ್ರತೀಕ್, ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಮಹಿಳೆಯನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆ ಹತ್ತಿರದ ಪ್ರದೇಶದ ನಿವಾಸಿ ಎಂದು ತಿಳಿದುಬಂದಿದೆ. ಆಕೆಯ ದೇಹದ ಮೇಲಿನ ಗಾಯಗಳ ಆಧಾರದ ಮೇಲೆ, ಹಲ್ಲೆಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ಪೊಲೀಸರು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರಂಭಿಕ ದೃಶ್ಯಗಳಲ್ಲಿ ಮಹಿಳೆ ಒಬ್ಬ ಪುರುಷನೊಂದಿಗೆ ಗ್ರೌಂಡ್ ಕಡೆಗೆ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸಲಾಗಿದ್ದು, ಆತನ ಗುರುತನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.
ಕೆಲವು ವರದಿಗಳ ಪ್ರಕಾರ, ವಿಚಾರಣೆಯ ಸಮಯದಲ್ಲಿ ಮುಖೇಶ್ ಎಂಬಾತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ಕೊ*ಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಎಸಿಪಿ ಹಿಮಾನಿ ಮಿಶ್ರಾ ತಿಳಿಸಿದ್ದಾರೆ. ಸಂತ್ರಸ್ತೆ ತನ್ನಿಂದ ಹಣ ಪಡೆಯುತ್ತಿದ್ದಳು. ಆದರೆ ಇತರ ಪುರುಷರೊಂದಿಗೆ ಸಹ ಸಂಬಂಧ ಹೊಂದಿದ್ದಳು ಎಂದು ಆತ ಹೇಳಿಕೊಂಡಿದ್ದಾನೆ. ಅಸೂಯೆ ಮತ್ತು ದ್ವೇಷದಿಂದ ಶನಿವಾರ ರಾತ್ರಿ ಆಕೆಯನ್ನು ಗ್ರೌಂಡ್ಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಮುಖವನ್ನು ಕಲ್ಲಿನಿಂದ ಹೊಡೆದು ಕೊ*ಲ್ಲಲು ಯತ್ನಿಸಿರುವುದಾಗಿ ಹೇಳಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ