ಕಾಶ್ಮೀರ ನಕಲಿ ಎನ್ಕೌಂಟರ್‌ ಮುಚ್ಚಿಹಾಕಲು ಸೇನಾಧಿಕಾರಿ ಯತ್ನ: ಆರೋಪಪಟ್ಟಿ

Published : Jan 25, 2021, 03:41 PM IST
ಕಾಶ್ಮೀರ ನಕಲಿ ಎನ್ಕೌಂಟರ್‌ ಮುಚ್ಚಿಹಾಕಲು ಸೇನಾಧಿಕಾರಿ ಯತ್ನ: ಆರೋಪಪಟ್ಟಿ

ಸಾರಾಂಶ

ಕಾಶ್ಮೀರ ನಕಲಿ ಎನ್ಕೌಂಟರ್‌ ಮುಚ್ಚಿಹಾಕಲು ಸೇನಾಧಿಕಾರಿ ಯತ್ನ: ಆರೋಪಪಟ್ಟಿ| ಉಗ್ರರ ಹತ್ಯೆಗಾಗಿ ಯೋಧರಿಗೆ ಬಹುಮಾನ ನೀಡಲ್ಲ: ಸೇನೆ

ಶೋಪಿಯಾನ್(ಜ.25)‌: ಕಳೆದ ವರ್ಷದ ಜುಲೈನಲ್ಲಿ ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಮೂವರು ಅಮಾಯಕರ ಹತ್ಯೆ ಮಾಡಲಾದ ನಕಲಿ ಎನ್‌ಕೌಂಟರ್‌ ಮುಚ್ಚಿಹಾಕಲು ಸೇನಾಧಿಕಾರಿಯೇ ಯತ್ನಿಸಿದ್ದಾರೆ ಎಂದು ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಮೂವರಿಗೆ ಶಸ್ತ್ರಾಸ್ತ್ರಗಳ ಪೂರೈಕೆಯ ಮೂಲ ಹಾಗೂ ಅವರು ಉಗ್ರರು ಎಂಬುದನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಈ ಎನ್‌ಕೌಂಟರ್‌ ನಡೆಸಿದ್ದ ಕ್ಯಾಪ್ಟನ್‌ ಭೂಪೇಂದ್ರ ಸಿಂಗ್‌ ಅವರು ವಿಫಲರಾಗಿದ್ದಾರೆ. ಜೊತೆಗೆ ಇನ್ನಿತರ ಇಬ್ಬರು ನಾಗರಿಕರೊಂದಿಗೆ ಸೇರಿ ಮೂವರು ಅಮಾಯಕರ ಹತ್ಯೆ ಮಾಡಿದ ತಮ್ಮ ಕೃತ್ಯದ ಸಾಕ್ಷ್ಯನಾಶಕ್ಕೂ ಯತ್ನಿಸಿದ್ದು, 20 ಲಕ್ಷ ರು. ಬಹುಮಾನದ ಹಣಕ್ಕಾಗಿ ಯೋಧ ಈ ಕೃತ್ಯ ಎಸಗಿದ್ದಾರೆ ಎಂದು ದೋಷಾರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಸೇನೆ ನಕಾರ:

ಆದರೆ 20 ಲಕ್ಷ ರು.ಗಾಗಿ ಯೋಧರು ಇಂಥ ಕೃತ್ಯ ಎಸಗಲ್ಲ ಎಂದು ಸೇನೆ ಹೇಳಿಕೊಂಡಿದೆ. ಜೊತೆಗೆ ಕರ್ತವ್ಯನಿರತ ಯೋಧರು ಉಗ್ರರನ್ನು ಹತ್ಯೆ ಮಾಡಿದಾಗ ನಗದು ಸೇರಿದಂತೆ ಯಾವುದೇ ರೀತಿಯ ಬಹುಮಾನ ನೀಡಲ್ಲ ಎಂದು ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!