ಸಲಿಂಗ ಸಂಬಂಧ ಭಾವನಾತ್ಮಕ ಬಾಂಧವ್ಯ: ಸುಪ್ರೀಂ ಸಿಜೆಐ

Published : Apr 21, 2023, 07:29 AM ISTUpdated : Apr 21, 2023, 07:30 AM IST
ಸಲಿಂಗ ಸಂಬಂಧ ಭಾವನಾತ್ಮಕ ಬಾಂಧವ್ಯ: ಸುಪ್ರೀಂ ಸಿಜೆಐ

ಸಾರಾಂಶ

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮೂರನೇ ದಿನವಾದ ಗುರುವಾರವೂ ಮುಂದುವರಿಸಿರುವ ಸುಪ್ರೀಂಕೋರ್ಟ್, ಮದುವೆಗೆ ಎರಡು ಭಿನ್ನ ಲಿಂಗಕ್ಕೆ ಸೇರಿದ ಜೋಡಿಗಳ ಅವಶ್ಯಕತೆ ಇದೆಯೇ? ಎಂದು ಪ್ರಶ್ನೆ ಕೇಳಿದೆ

ನವದೆಹಲಿ: ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮೂರನೇ ದಿನವಾದ ಗುರುವಾರವೂ ಮುಂದುವರಿಸಿರುವ ಸುಪ್ರೀಂಕೋರ್ಟ್, ಮದುವೆಗೆ ಎರಡು ಭಿನ್ನ ಲಿಂಗಕ್ಕೆ ಸೇರಿದ ಜೋಡಿಗಳ ಅವಶ್ಯಕತೆ ಇದೆಯೇ? ಎಂದು ಪ್ರಶ್ನೆ ಕೇಳಿದೆ. ಸಲಿಂಗ ಸಂಬಂಧ ಎಂಬುದು ಭೌತಿಕ ಬಾಂಧವ್ಯವಷ್ಟೇ ಅಲ್ಲ. ಅದು ಸ್ಥಿರವಾದ ಹಾಗೂ ಭಾವನಾತ್ಮಕ ಸಂಬಂಧ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ (Justice Chandrahud) ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ಮುನ್ನ ವಿವಾಹ ಎಂಬುದರ ಬದಲಾದ ಪರಿಕಲ್ಪನೆಯನ್ನು ಮರು ವ್ಯಾಖ್ಯಾನಿಸಬೇಕಾದ ಅವಶ್ಯಕತೆ ಇದೆ. ಏಕೆಂದರೆ, ಎರಡು ಭಿನ್ನ ಲಿಂಗಗಳಿಗೆ ಸೇರಿದ ಇಬ್ಬರು ವ್ಯಕ್ತಿಗಳ ಅಸ್ತಿತ್ವ ವಿವಾಹದ ಅಗತ್ಯಕ್ಕೆ ಅವಶ್ಯವಿದೆಯೇ? ಎಂದು ಪ್ರಶ್ನಿಸಿದರು. ವೈಯಕ್ತಿಕ ಕಾನೂನು (Personel Law) ಪಾಲಿಸಲು ಬಯಸದೇ ಇರುವ ನಾಗರಿಕರ ವಿವಾಹಕ್ಕೆ ಅವಕಾಶ ಕಲ್ಪಿಸಲು 1954ರಲ್ಲಿ ವಿಶೇಷ ವಿವಾಹ ಕಾಯ್ದೆಯನ್ನು ರೂಪಿಸಲಾಗಿದೆ. ಅದಾಗಿ 69 ವರ್ಷಗಳಾದ ಬಳಿಕ ಆ ಕಾನೂನು ಗಮನಾರ್ಹ ರೀತಿಯಲ್ಲಿ ವಿಕಾಸಗೊಂಡಿದೆ ಎಂದರು.

ಸಮಗ್ರ ಅಧಿಕಾರ ಬಳಸಿ ಸಲಿಂಗ ವಿವಾಹಕ್ಕೆ ಮನ್ನಣೆ ನೀಡಿ: ಸುಪ್ರೀಂಕೋರ್ಟ್‌ಗೆ ಸಲಿಂಗಿಗಳ ಪರ ವಕೀಲರ ಮನವಿ

ಸಲಿಂಗಕಾಮವನ್ನು ಅಪರಾಧಮುಕ್ತಗೊಳಿಸುವ ಮೂಲಕ ಒಂದೇ ಲಿಂಗದ ಇಬ್ಬರು ಪರಸ್ಪರ ಸಮ್ಮತಿ ಹೊಂದಿದ ವಯಸ್ಕರ ಸಂಬಂಧಕ್ಕೆ (Adults relationship) ಮಾನ್ಯತೆ ನೀಡಿದ್ದಷ್ಟೇ ಅಲ್ಲ, ಒಂದೇ ಲಿಂಗದ ಸಂಬಂಧವಿರುವ ವ್ಯಕ್ತಿಗಳು ಸ್ಥಿರವಾದ ಬಾಂಧವ್ಯವನ್ನು ಹೊಂದಿರುತ್ತಾರೆ ಎಂಬುದಕ್ಕೂ ಮಾನ್ಯತೆ ನೀಡಲಾಗಿದೆ ಎಂದು ಹೇಳಿದರು.

ಧರ್ಮಗಳ ವಿವಾಹ ಕಾಯ್ದೆ ಅನ್ವಯ ಸಲಿಂಗ ವಿವಾಹ ವಿಚಾರಣೆ ನಡೆಸಲ್ಲ: ಸುಪ್ರೀಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?