ಉರಿ ಬಿಸಿಲು ಕಾಯಿಸ್ಕೊಳ್ಳಿ ಕೊರೋನಾ ಸಾಯುತ್ತೆ: ಕೇಂದ್ರ ಸಚಿವರ ಹುಚ್ಚು ಸಲಹೆ!

Published : Mar 19, 2020, 01:08 PM ISTUpdated : Mar 19, 2020, 05:10 PM IST
ಉರಿ ಬಿಸಿಲು ಕಾಯಿಸ್ಕೊಳ್ಳಿ ಕೊರೋನಾ ಸಾಯುತ್ತೆ: ಕೇಂದ್ರ ಸಚಿವರ ಹುಚ್ಚು ಸಲಹೆ!

ಸಾರಾಂಶ

ಕೊರೋನಾ ಅಟ್ಟಹಾಸ| ಕೊರೋನಾ ತಡೆಯಲು ಕೇಂದ್ರ ಸಚಿವರ ವಿಚಿತ್ರ ಸಲಹೆ| ಬಿಸಿಲಿಗೆ ನಿಲ್ಲಿ ಕೊರೋನಾ ಓಡಿಸಿ

ನವದೆಹಲಿ[ಮಾ.19]: ವಿಶ್ವದಲ್ಲಿ ಅಟ್ಟಹಾಸ ಮೂಡಿಸಿರುವ ಕೊರೋನಾ ವೈರಸ್ ಸದ್ಯ ದೇಶದಲ್ಲೂ ತನ್ನ ರುದ್ರ ತಾಂಡವ ಮುಂದುವರೆಸಿದೆ. ದೇಸದಲ್ಲಿ ಒಟ್ಟು 3 ಮಂದಿ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 150 ದಾಟಿದೆ. ಸರ್ಕಾರ ಕೂಡಾ ಸೋಂಕು ತಡೆಗಟ್ಟುವಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸುತ್ತಿದೆ. ಹೀಗಿರುವಾಗ ಕೇಂದ್ರ ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕೊರೋನಾವನ್ನು ನಿಯಂತ್ರಿಸಲು ಮಧ್ಯಾಹ್ನದ ಉರಿ ಬಿಸಿಲಿಗೆ ಕುಳಿತುಕೊಳ್ಳುವಂತೆ ಸೂಚಿಸಿದ್ದಾರೆ.

ಹೌದು ಸಂಸತ್ತು ಆವರಣದಲ್ಲಿ ಕೊರೋನಾ ವೈರಸ್ ನಿಯಂತ್ರಣ ಸಂಬಂಧ ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ 'ಮಧ್ಯಾಹ್ನ 11 ಗಂಟೆಯಿಂದ 2 ಗಂಟೆವರೆಗೆ ಹೆಚ್ಚು ಬಿಸಿಲಿರುತ್ತದೆ, ಸೂರ್ಯನ ಕಿರಣಗಳು ಹೆಚ್ಚು ಪ್ರಖರವಾಗಿರುತ್ತವೆ. ಹೀಗಿರುವಾಗ ಸುಮಾರು 15 ನಿಮಿಷ ಬಿಸಿಲು ಕಾಯಿಸಿಕೊಂಡರೆ ಬಹಳ ಲಾಭದಾಯಕ. ಅದರಿಂದ ವಿಟಮಿನ್ ಡಿ ನಮ್ಮ ದೇಹ ಸೇರುತ್ತದೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಜೊತೆಗೆ ಎಲ್ಲಾ ಪ್ರಕಾರದ ವೈರಸ್ ನಾಶಗೊಳ್ಳುತ್ತವೆ. ಹೀಗಗಿ ಬಿಸಿಲು ಸೇವಿಸಬೇಕು' ಎಂದಿದ್ದಾರೆ.

ಸದ್ಯ ಕೇಂದ್ರ ಸಚಿವ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಒಂದೆಡೆ ವೈದ್ಯರು ಬಿಸಿಲಿನ ತಾಪಕ್ಕೆ ಕೊರೋನಾ ವೈರಸ್ ನಾಶವಾಗುವುದಿಲ್ಲ ಎಂಬ ಪಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕೇಂದ್ರ ಸಚಿವರು ಇಂತಹ ಹೇಳಿಕೆ ನೀಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಮಾರ್ಚ್ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ