ಗುಜರಾತಿಂದ ಬಿಹಾರಕ್ಕೆ ಹೊರಟಿದ್ದ ಶ್ರಮಿಕ್‌ ರೈಲು ತಲುಪಿದ್ದು ಬೆಂಗಳೂರಿಗೆ!

Published : May 27, 2020, 01:16 PM ISTUpdated : May 27, 2020, 01:56 PM IST
ಗುಜರಾತಿಂದ ಬಿಹಾರಕ್ಕೆ ಹೊರಟಿದ್ದ ಶ್ರಮಿಕ್‌ ರೈಲು ತಲುಪಿದ್ದು ಬೆಂಗಳೂರಿಗೆ!

ಸಾರಾಂಶ

ವಲಸೆ ಕಾರ್ಮಿಕರನ್ನು ಹೊತ್ತೊಯ್ದಿದ್ದ ಶ್ರಮಿಕ್‌ ರೈಲು|  ಗುಜರಾತ್‌ನಿಂದ ಬಿಹಾರಕ್ಕೆ ಹೋಗಬೇಕಿದ್ದ ಶ್ರಮಿಕ್‌ ರೈಲು ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಬಂದಿದೆ| ರೈಲು ಪತ್ತೆ ಹಚ್ಚಿ ಮೇ 25ರಂದು ಬಿಹಾರಕ್ಕೆ ರವಾನೆ

ನವದೆಹಲಿ(ಮೇ.27): ಇತ್ತೀಚೆಗಷ್ಟೇ ವಲಸೆ ಕಾರ್ಮಿಕರನ್ನು ಹೊತ್ತೊಯ್ದಿದ್ದ ಶ್ರಮಿಕ್‌ ರೈಲೊಂದು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ತೆರಳದೆ ಒಡಿಶಾಕ್ಕೆ ತೆರಳಿದ್ದ ಘಟನೆ ಬೆನ್ನಲ್ಲೇ, ಗುಜರಾತ್‌ನಿಂದ ಬಿಹಾರಕ್ಕೆ ಹೋಗಬೇಕಿದ್ದ ಶ್ರಮಿಕ್‌ ರೈಲು ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಬಂದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೇ 16ರಂದು ಗುಜರಾತ್‌ನ ಸೂರತ್‌ನಿಂದ ಹೊರಟಿದ್ದ ರೈಲು ಮೇ 18ಕ್ಕೆ ಬಿಹಾರದ ಚಾಪ್ರ ರೈಲು ನಿಲ್ದಾಣಕ್ಕೆ ತಲುಪಬೇಕಿತ್ತು. ಆದರೆ, ಈ ರೈಲ್ವೆ ಇಲಾಖೆ ಸಿಬ್ಬಂದಿ ಯಡವಟ್ಟಿನಿಂದಾಗಿ ಈ ರೈಲು ಬೆಂಗಳೂರಿಗೆ ಬಂದು ನಿಂತಿತ್ತು.

ಯುಪಿಗೆ ಹೊರಟಿದ್ದ ಶ್ರಮಿಕ್‌ ರೈಲು ತಲುಪಿದ್ದು ಒಡಿಶಾಗೆ: ವಲಸೆ ಕಾರ್ಮಿಕರು ಕಂಗಾಲು!

ಕೊನೆಗೆ, ಈ ರೈಲನ್ನು ಪತ್ತೆ ಹಚ್ಚಿ ಬಳಿಕ ಮೇ 25ರಂದು ಬಿಹಾರಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ರೈಲ್ವೇ ಸಚಿವ ಪಿಯೂಷ್ ಗೋಯಲ್ ರಾಜೀನಾಮೆ ನೀಡಬೇಕೆಂಬ ಒತ್ತಾಯವೂ ಕೇಳಿ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ