ಒಂದು ತಿಂಗಳಲ್ಲಿ ರಾಮಮಂದಿರಕ್ಕೆ 1511 ಕೋಟಿ ರೂ. ದೇಣಿಗೆ ಸಂಗ್ರಹ!

Published : Feb 14, 2021, 09:15 AM IST
ಒಂದು ತಿಂಗಳಲ್ಲಿ ರಾಮಮಂದಿರಕ್ಕೆ 1511 ಕೋಟಿ ರೂ. ದೇಣಿಗೆ ಸಂಗ್ರಹ!

ಸಾರಾಂಶ

ಒಂದು ತಿಂಗಳಲ್ಲಿ ರಾಮಮಂದಿರಕ್ಕೆ 1511 ಕೋಟಿ ದೇಣಿಗೆ ಸಂಗ್ರಹ|  ಫೆ.27ರವರೆಗೂ ನಡೆಯಲಿದೆ ದೇಣಿಗೆ ಸಂಗ್ರಹ ಅಭಿಯಾನ| 4 ಲಕ್ಷ ಹಳ್ಳಿಗಳ 11 ಕೋಟಿ ಕುಟುಂಬ ಭೇಟಿಯ ಉದ್ದೇಶ

 

ಸೂರತ್‌(ಫೆ.14): ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಅಭಿಯಾನಕ್ಕೆ ದೇಶವ್ಯಾಪಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ದೇಣಿಗೆ ಸಂಗ್ರಹ ಅಭಿಯಾನ ಆರಂಭವಾದ 1 ತಿಂಗಳಿಗೂ ಮೊದಲೇ 1500 ಕೋಟಿ ರು.ಗೂ ಹೆಚ್ಚಿನ ಹಣ ಹರಿದುಬಂದಿದೆ.

ಈ ಕುರಿತು ಹೇಳಿಕೆ ನೀಡಿರುವ ದೇಗುಲ ನಿರ್ಮಾಣದ ಹೊಣೆ ಹೊತ್ತಿರುವ ಟ್ರಸ್ಟ್‌ನ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ ದೇವ ಗಿರಿ, ಇದುವರೆಗೆ ದೇಶದ ವಿವಿಧ ಭಾಗಗಳಿಂದ ಟ್ರಸ್ಟ್‌ನ ಖಾತೆಗೆ 1511 ಕೋಟಿ ರು. ಹಣ ಸಂದಾಯವಾಗಿದೆ. ನಮ್ಮ ಕಾರ್ಯಕರ್ತರು ಫೆ.27ರೊಳಗೆ ದೇಶದ 4 ಲಕ್ಷ ಹಳ್ಳಿಗಳ 11 ಕೋಟಿ ಕುಟುಂಬಗಳನ್ನು ಭೇಟಿ ಮಾಡಿ ದೇಣಿಗೆ ಸಂಗ್ರಹಿಸುವ ಗುರಿ ಹಾಕಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

:ಇಂಥದೊಂದು ಮಂದಿರ ನಿರ್ಮಾಣದ ಅವಕಾಶ 492 ವರ್ಷಗಳ ಬಳಿಕ ಸಿಕ್ಕಿರುವ ಹಿನ್ನೆಲೆಯಲ್ಲಿ ಭಕ್ತರು ಮನಃಪೂರ್ವಕವಾಗಿ ದೇಣಿಗೆ ನೀಡುತ್ತಿದ್ದಾರೆ’ ಎಂದು ಗಿರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಜ.15ರಂದು ಈ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಂಬೈ ಮೇಯರ್‌ ಹುದ್ದೆ ಅವಧಿ ಹಂಚಿಕೆಗೆ ಸೇನೆ ಸದಸ್ಯರ ಪಟ್ಟು
ಪಾಲಿಕೆ ಚುನಾವಣೆಯಲ್ಲಿ ರಾಜ್ ಠಾಕ್ರೆಗೆ ಮುಖಭಂಗ? 'ರಸಮಲೈ' ವ್ಯಂಗ್ಯಕ್ಕೆ ಅಣ್ಣಾಮಲೈ ಕೊಟ್ಟ ತಿರುಗೇಟು ಹೇಗಿದೆ ಗೊತ್ತಾ?