
ಅಮರಾವತಿ[ಫೆ.13]: ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿದ್ದ ತಮ್ಮ ಪೂರ್ವಜರ ಆಸ್ತಿಯನ್ನು ಕಂಚಿಕಾಮಕೋಟಿ ಪೀಠಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಸಂಸ್ಕೃತ ಮತ್ತು ವೇದಾಧ್ಯಯನ ಶಾಲೆ ನಡೆಸುವ ಕಂಚಿ ಮಠದ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅವರಿಗೆ ತಮ್ಮ ಹಿರಿಯರ ಮನೆಯನ್ನು ಹಸ್ತಾಂತರಿಸಿದರು.
ಕನ್ನಡ, ತಮಿಳು, ತೆಲಗು ಹಾಗೂ ಹಿಂದಿ ಭಾಷೆಗಳ ಹಲವು ಹಾಡುಗಳಿಗೆ ಧ್ವನಿಯಾಗಿರುವ ಗಾಯಕ ಎಸ್ಪಿಬಿ ಅವರಿಗೆ 6 ರಾಷ್ಟ್ರೀಯ ಪುರಸ್ಕಾರಗಳು ಹರಸಿಬಂದಿವೆ. ಸದ್ಯ, ಚೆನ್ನೈನಲ್ಲಿ ವಾಸವಾಗಿರುವ ಎಸ್ಪಿಬಿ ಅವರ ನೆಲ್ಲೂರು ನಿವಾಸಕ್ಕೆ ಹಲವು ವರ್ಷಗಳ ಕಾಲ ಬೀಗ ಜಡಿಯಲಾಗಿತ್ತು.
ಕೆಲ ವಾಣಿಜ್ಯ ಉದ್ಯಮಕ್ಕಾಗಿ ಬಳಸಿಕೊಳ್ಳಲು ಮನೆಯನ್ನು ನೀಡುವಂತೆ ಕೋರಿದ್ದರೂ, ಈ ಆಫರ್ಗಳನ್ನು ಎಸ್ಪಿಬಿ ನಿರಾಕರಿಸುತ್ತಾ ಬಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ