ಕಣ್ಮುಂದೆ ಬೆಂಕಿ ಹಚ್ಚಿಕೊಂಡ ಅಕ್ಕನ ರಕ್ಷಿಸದೇ ವೀಡಿಯೋ ಮಾಡ್ತಾ ನಿಂತ ತಮ್ಮ

Published : May 15, 2023, 05:26 PM IST
 ಕಣ್ಮುಂದೆ ಬೆಂಕಿ ಹಚ್ಚಿಕೊಂಡ ಅಕ್ಕನ ರಕ್ಷಿಸದೇ ವೀಡಿಯೋ ಮಾಡ್ತಾ ನಿಂತ ತಮ್ಮ

ಸಾರಾಂಶ

ಕಣ್ಮುಂದೆಯೇ ಸಹೋದರಿ ಬೆಂಕಿ ಹಚ್ಚಿಕೊಂಡು ಒದ್ದಾಡುತ್ತಿದ್ದರೂ ಆಕೆಯ ಸಹೋದರ ಆಕೆಯನ್ನು ರಕ್ಷಿಸಲು ಮುಂದಾಗದೇ ವೀಡಿಯೋ ಮಾಡುತ್ತಾ ನಿಂತಿದ್ದಂತಹ ಆಘಾತಕಾರಿ ಘಟನೆ  ಉತ್ತರಪ್ರದೇಶದ ಶಜಹಾನ್‌ಪುರದಲ್ಲಿ ಬೆಳಕಿಗೆ ಬಂದಿದೆ.

ಶಜಹಾನ್‌ಪುರ: ಕಣ್ಮುಂದೆಯೇ ಸಹೋದರಿ ಬೆಂಕಿ ಹಚ್ಚಿಕೊಂಡು ಒದ್ದಾಡುತ್ತಿದ್ದರೂ ಆಕೆಯ ಸಹೋದರ ಆಕೆಯನ್ನು ರಕ್ಷಿಸಲು ಮುಂದಾಗದೇ ವೀಡಿಯೋ ಮಾಡುತ್ತಾ ನಿಂತಿದ್ದಂತಹ ಆಘಾತಕಾರಿ ಘಟನೆ  ಉತ್ತರಪ್ರದೇಶದ ಶಜಹಾನ್‌ಪುರದಲ್ಲಿ ಬೆಳಕಿಗೆ ಬಂದಿದೆ.  ಈ ದೃಶ್ಯಾವಳಿ ಅಲ್ಲೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಸರೋಜಾ ಯಾದವ್ (Saroja Yadav) ಹೀಗೆ ಸಹೋದರನ ಕಣ್ಮುಂದೆ ಬೆಂಕಿ ಹಚ್ಚಿಕೊಂಡ ಮಹಿಳೆ. ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿರುವ ವೀಡಿಯೋದಲ್ಲಿ ನೇರಳೆ ಬಣ್ಣದ ಚೂಡಿಧಾರ್ ಧರಿಸಿದ್ದ ಮಹಿಳೆ ತನ್ನ ಮನೆಯ ಆವರಣದಲ್ಲಿ ನಿಂತಿದ್ದು, ಮೊದಲೇ ಮೈಗೆ ಗ್ಯಾಸೋಲಿನ್ ಸುರಿದುಕೊಂಡಿದ್ದ ಆಕೆ ತನ್ನ ಮೈಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಆದರೆ ಅದಕ್ಕಿಂತ ವಿಪರ್ಯಾಸ ಎಂದರೆ ಈ ವೇಳೆ ಅಲ್ಲಿದ್ದ ಆಕೆಯ ಸ್ವಂತ ಸಹೋದರ ಸಂಜೀವ್ ಯಾದವ್‌ ಆಕೆಯನ್ನು ರಕ್ಷಿಸಲು ಮುಂದಾಗದೇ ಮೊಬೈಲ್‌ ತೆಗೆದುಕೊಂಡು ವೀಡಿಯೋ ಮಾಡಿದ್ದು, ಹಾಗಂತ ಈತನೇನು ಸಣ್ಣ ಹುಡುಗನಲ್ಲ 26 ವರ್ಷದ ತರುಣ.

ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿದ್ದ ಮುಖಂಡರ ಕಾರಿಗೆ ಬೆಂಕಿ

ಇದಕ್ಕೂ ಮೊದಲು ಸರೋಜಾಳ ಪೋಷಕರಾದ  ಸುಂದರ್‌ಲಾಲ್ ಯಾದವ್ (Sundarlal) ಮತ್ತು ಊರ್ಮಿಳಾ (Urmila) ಅವರಿಗೆ ನೆರೆಮನೆಯ ಪವನ್ ಗುಪ್ತಾ ಮತ್ತು ಸುಮನ್ ಗುಪ್ತಾ ಅವರೊಂದಿಗೆ ದೊಡ್ಡ ಜಗಳವಾಗಿತ್ತು. ಈ ಮಧ್ಯೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನೆರೆಮನೆಯ ಪವನ್ ಗುಪ್ತಾ ಪತ್ನಿ ಪ್ರತೀಕ್ಷಾ ಗುಪ್ತಾ ಅವರು, ಗೆಲುವು ಸಾಧಿಸಿ ಸಮುದಾಯದಲ್ಲಿ ತಮ್ಮ ಸ್ಥಾನಮಾನವನ್ನು ಹೆಚ್ಚಿಸಿಕೊಂಡಿದ್ದರು. ಪವನ್ ಗುಪ್ತಾ  (Pavan Gupta) ಹೆಂಡತಿಯ ರಾಜಕೀಯ ಅಧಿಕಾರವನ್ನು ಬಳಸಿಕೊಂಡು ಆಕೆಯ ಕುಟುಂಬಕ್ಕೆ ನಿರಂತರ ಕಿರುಕುಳ ನೀಡುತ್ತಾ ಬಂದಿದ್ದ ಎಂದು  ತಿಳಿದು ಬಂದಿದೆ. ಇತ್ತೀಚೆಗೆ ಪತ್ನಿ ಚುನಾವಣೆಯಲ್ಲಿ ಗೆದ್ದ ಬಳಿಕ ಸರೋಜಾ ಕುಟುಂಬಕ್ಕೆ ಪವನ್‌ಗುಪ್ತಾನಿಂದ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ. 

ಈ ಗಲಾಟೆಯಲ್ಲಿ ಸರೋಜಾಳ ಪೋಷಕರಾದ  ಸುಂದರ್‌ಲಾಲ್ ಯಾದವ್ (Sundarlal Yadav) ಮತ್ತು ಊರ್ಮಿಳಾ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇದರಿಂದ ಧೃತಿಗೆಟ್ಟ ಸರೋಜಾ ಈ ಅನಾಹುತಕಾರಿ ನಿರ್ಧಾರ ಕೈಗೊಂಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಬೆಂಕಿ ಹಚ್ಚಿಕೊಂಡ ಸರೋಜಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. 

ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೊತ್ತಿ ಭಸ್ಮವಾದ ಮದುವೆ ದಿಬ್ಬಣದ ಖಾಸಗಿ ಬಸ್!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ