ತಿರುಪತಿ ಬೆಟ್ಟ ಹತ್ತುವಾಗ ಚಿರತೆ ದಾಳಿ, ಬಾಲಕಿ ಬಲಿ, ಬೆಟ್ಟ ಏರುವ ಭಕ್ತರಲ್ಲಿ ಆತಂಕ

Published : Aug 13, 2023, 08:50 AM IST
ತಿರುಪತಿ ಬೆಟ್ಟ ಹತ್ತುವಾಗ ಚಿರತೆ ದಾಳಿ, ಬಾಲಕಿ ಬಲಿ, ಬೆಟ್ಟ ಏರುವ ಭಕ್ತರಲ್ಲಿ ಆತಂಕ

ಸಾರಾಂಶ

6 ವರ್ಷದ ಲಕ್ಷಿತಾಳನ್ನು ಎಳೆದೊಯ್ದು ಕೊಂದ ಚಿರತೆ. ಪಾದಚಾರಿ ಮಾರ್ಗದಲ್ಲಿ ಚಿರತೆಗೆ ಬಲಿಯಾದ ಮೊದಲ ಘಟನೆ. ಪಾದಯಾತ್ರೆ ಮೂಲಕ ಬೆಟ್ಟಏರುವ ಭಕ್ತರಲ್ಲಿ ಆತಂಕ.

ತಿರುಪತಿ (ಆ.13): ದೇಶದ ಅತಿ ಶ್ರೀಮಂತ ದೇಗುಲವಾದ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ಸಾಗುತ್ತಿದ್ದ 6 ವರ್ಷದ ಬಾಲಕಿಯೊಬ್ಬಳು ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ತಿರುಮಲಕ್ಕೆ ತೆರಳುವ ಪಾದಚಾರಿ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಪಾದಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಲಿಯಾದ ಮೊದಲ ಘಟನೆ ಇದಾಗಿದೆ. ಈ ಘಟನೆಯು ಭಕ್ತರನ್ನು ಬೆಚ್ಚಿ ಬೀಳಿಸಿದೆ.

ಕಳೆದ ಜೂ.22ರಂದು ಪಾದಚಾರಿ ಮಾರ್ಗದ 7ನೇ ಮೈಲಿ ಬಳಿ ಇದೇ ರೀತಿ ಚಿರತೆಯೊಂದು ಪಾಲಕರ ಜತೆ ಪಾದಯಾತ್ರೆಯಲ್ಲಿ ಸಾಗುತ್ತಿದ್ದ 5 ವರ್ಷದ ಬಾಲಕನ ಮೇಲೆ ದಾಳಿ ನಡೆಸಿತ್ತು. ಆದರೆ ಆತ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದ. ಆದರೆ ಮರುದಿನವೇ ಒಂದು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಆದರೂ ಈಗ ಅದೇ ರೀತಿಯ ಘಟನೆ ಮರುಕಳಿಸಿದೆ. ಹೀಗಾಗಿ ಬೆಟ್ಟದಲ್ಲಿ ಸಾಕಷ್ಟುಚಿರತೆಗಳು ಇವೆ ಎಂಬುದು ಸಾಬೀತಾಗಿದ್ದು, ಇವುಗಳ ನಿಗ್ರಹವು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಸಮಿತಿ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ.

ತಿರುಪತಿ: ಮುಡಿ ಕೊಡುವುದಕ್ಕೂ, ಸಪ್ತಗಿರಿಯ ನೀಲಾದ್ರಿ ಬೆಟ್ಟಕ್ಕೂ ಇದೆ ಲಿಂಕ್!

ಆಗಿದ್ದೇನು?: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೊವ್ವೂರು ಮಂಡಲದ ಪೋತಿರೆಡ್ಡಿಪಾಲೆಂ ಗ್ರಾಮದ ದಿನೇಶ ಕುಮಾರ್‌ ಮತ್ತು ಶಶಿಕಲಾ ಅವರು ಮಗಳು ಲಕ್ಷಿತಾ (6) ಜತೆ ತಿರುಮಲ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಸಾಗುತ್ತಿದ್ದರು. ಶುಕ್ರವಾರ ರಾತ್ರಿ 7.30ರಿಂದ 8 ಗಂಟೆಯ ಸುಮಾರಿಗೆ ಲಕ್ಷ್ಮೇ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ಬೆಟ್ಟದ ಮೇಲೆ ಕುಟುಂಬ ಸಮೇತರಾಗಿ ನಡೆದುಕೊಂಡು ಹೋಗುತ್ತಿದ್ದಾಗ ಬಂದ ಚಿರತೆ, ಅವರ ಮೇಲೆ ದಾಳಿ ಮಾಡಿ ಬಾಲಕಿಯನ್ನು ಸಮೀಪದ ಅರಣ್ಯಕ್ಕೆ ಎಳೆದೊಯ್ದಿದೆ. ಪಾಲಕರು ಮತ್ತು ಸಹ ಪಾದಚಾರಿಗಳು ರಕ್ಷಣೆಗೆ ಯತ್ನಿಸಿದರೂ ಕತ್ತಲಾಗಿದ್ದರಿಂದ ಸಾಧ್ಯವಾಗಲಿಲ್ಲ.

ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

ಹೀಗಾಗಿ ಟಿಟಿಡಿ ಭದ್ರತಾಧಿಕಾರಿಗಳು, ಸ್ಥಳೀಯ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ, ಶನಿವಾರ ಮುಂಜಾನೆ ಅರಣ್ಯ ಪ್ರದೇಶದಲ್ಲಿ ಬಾಲಕಿಗಾಗಿ ಹುಡುಕಾಟ ನಡೆಸಿದಾಗ, ಅರಣ್ಯ ಪ್ರದೇಶವಾದ ಲಕ್ಷ್ಮೇ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ನಸುಕಿನ 4 ಗಂಟೆಗೆ ಶವ ಪತ್ತೆಯಾಗಿದೆ. ಬಾಲಕಿಯ ದೇಹವನ್ನು ಚಿರತೆ ಸಂಪೂರ್ಣವಾಗಿ ತುಂಡರಿಸಿದೆ. ಈ ಚಿರತೆ ದಾಳಿಯು ತಿರುಮಲಕ್ಕೆ ಪಾದಚಾರಿ ಮಾರ್ಗದಲ್ಲಿ ಪಾದಯಾತ್ರೆ ಮಾಡುವ ಭಕ್ತರಲ್ಲಿ ಭೀತಿ ಆವರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ