ಕೃಷಿ ಕಾಯ್ದೆ ವಿರೋಧಿಸಿದ್ದಎಸ್‌ಕೆಎಂನಿಂದ ರಾಮ್‌ ಜಿ ವಿರುದ್ಧ ಜ.16ಕ್ಕೆ ಹೋರಾಟ

Kannadaprabha News   | Kannada Prabha
Published : Dec 23, 2025, 05:31 AM IST
sanyukt kisan morcha

ಸಾರಾಂಶ

ಮನರೇಗಾ ಯೋಜನೆಯನ್ನು ಬದಲಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿ ರಾಮ್‌ ಜಿ ಯೋಜನೆಯ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಕಾನೂನನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದು, ಜ.16ರಂದು ‘ಪ್ರತಿರೋಧ ದಿನ’ವನ್ನಾಗಿ ಆಚರಿಸಿ ಪ್ರತಿಭಟನೆ

ನವದೆಹಲಿ: ಮನರೇಗಾ ಯೋಜನೆಯನ್ನು ಬದಲಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿ ರಾಮ್‌ ಜಿ ಯೋಜನೆಯ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಕಾನೂನನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದು, 2026ರ ಜ.16ರಂದು ದೇಶಾದ್ಯಂತ ‘ಪ್ರತಿರೋಧ ದಿನ’ವನ್ನಾಗಿ ಆಚರಿಸಿ ಪ್ರತಿಭಟನೆ ಮಾಡಲು ಕಾರ್ಮಿಕರು ಮತ್ತು ರೈತರಿಗೆ ಕರೆ ನೀಡಿದೆ. ಜಿ ರಾಮ್‌ ಜಿ ಜೊತೆಗೆ ಹೊಸ ಕಾರ್ಮಿಕ ಕಾಯ್ದೆಗಳು, ಬೀಜ ಮಸೂದೆ-2025, ವಿದ್ಯುತ್ ಮಸೂದೆ-2025 ಇತ್ಯಾದಿಗಳ ರದ್ದತಿಗೂ ಆಗ್ರಹಿಸಿದೆ.

2020ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಯ ವಿರುದ್ಧ ಎಸ್‌ಕೆಎಂ ನಡೆಸಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿತ್ತು. ಆ ಬಳಿಕ ಸರ್ಕಾರ ಕಾಯ್ದೆಯನ್ನು ಹಿಂಪಡೆದಿತ್ತು.

ನ್ಯಾಷನಲ್ ಹೆರಾಲ್ಡ್ ಕೇಸ್‌: ಸೋನಿಯಾ, ರಾಹುಲ್‌ಗೆ ಹೈಕೋರ್ಟ್‌ ನೋಟಿಸ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ ಅರ್ಜಿಗೆ ಕುರಿತು ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರಿಗೆ ದೆಹಲಿ ಹೈಕೋರ್ಟ್ ಸೋಮವಾರ ಸೂಚಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಆರೋಪಪಟ್ಟಿ

ಗಾಂಧಿ ಕುಟುಂಬ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಆರೋಪಪಟ್ಟಿ ಸಲ್ಲಿಸಿತ್ತು. ಈ ಆರೋಪಪಟ್ಟಿಯನ್ನು ದೆಹಲಿ ವಿಚಾರಣಾ ನ್ಯಾಯಾಲಯ ಡಿ.16ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ. ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಗೆ ಪ್ರತಿಕ್ರಿಯಿಸುವಂತೆ ನ್ಯಾ. ರವೀಂದರ್‌ ದುಡೇಜಾ ಅವರು ಗಾಂಧಿ ಕುಟುಂಬ ಹಾಗೂ ಇತರರಿಗೆ ನೋಟಿಸ್‌ ನೀಡಿದ್ದು, 2026ರ ಮಾ.12ಕ್ಕೆ ವಿಚಾರಣೆ ಮುಂದೂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

₹1.50 ಲಕ್ಷದತ್ತ ಚಿನ್ನದರ ನಾಗಾಲೋಟ!
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್