ಹೊಗೆ ಬಾಂಗ್‌: ಇನ್ಮುಂದೆ ವಿಮಾನ ನಿಲ್ದಾಣ ಮಾದರಿಯಲ್ಲಿ ಸಂಸತ್‌ನಲ್ಲಿ ತಪಾಸಣೆ

Published : Jan 24, 2024, 11:55 AM IST
ಹೊಗೆ ಬಾಂಗ್‌: ಇನ್ಮುಂದೆ ವಿಮಾನ ನಿಲ್ದಾಣ ಮಾದರಿಯಲ್ಲಿ ಸಂಸತ್‌ನಲ್ಲಿ ತಪಾಸಣೆ

ಸಾರಾಂಶ

ಮೈಸೂರಿನ ಮನೋರಂಜನ್‌ ಸೇರಿದಂತೆ ಐವರು ವ್ಯಕ್ತಿಗಳಿಂದ ಸಂಸತ್ತಿನಲ್ಲಿ ನಡೆದ ಹೊಗೆ ಬಾಂಬ್‌ ದಾಳಿಯ ಹಿನ್ನೆಲೆಯಲ್ಲಿ ಸಂಸತ್‌ನ ಭದ್ರತೆ ಹೊಣೆ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, 140 ಮಂದಿ ಯೋಧರ ತಂಡವನ್ನು ರಕ್ಷಣೆಗಾಗಿ ನೇಮಕ ಮಾಡಿದೆ.

ನವದೆಹಲಿ: ಮೈಸೂರಿನ ಮನೋರಂಜನ್‌ ಸೇರಿದಂತೆ ಐವರು ವ್ಯಕ್ತಿಗಳಿಂದ ಸಂಸತ್ತಿನಲ್ಲಿ ನಡೆದ ಹೊಗೆ ಬಾಂಬ್‌ ದಾಳಿಯ ಹಿನ್ನೆಲೆಯಲ್ಲಿ ಸಂಸತ್‌ನ ಭದ್ರತೆ ಹೊಣೆ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, 140 ಮಂದಿ ಯೋಧರ ತಂಡವನ್ನು ರಕ್ಷಣೆಗಾಗಿ ನೇಮಕ ಮಾಡಿದೆ.

ಜ.31ರಿಂದ ಆರಂಭವಾಗುವ ಸಂಸತ್ತಿನ ಬಜೆಟ್‌ ಅಧಿವೇಶನದಿಂದಲೇ ವಿಮಾನ ನಿಲ್ದಾಣದ ರೀತಿಯ ಭದ್ರತೆ ಆರಂಭವಾಗಲಿದ್ದು, ಸಂದರ್ಶಕರ ಬಾಡಿ ಫ್ರಿಸ್ಕಿಂಗ್‌, ಬ್ಯಾಗ್‌ಗಳ ತಪಾಸಣೆ ಕಾರ್ಯ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮತ್ತು ಹಳೆಯ ಸಂಸತ್‌ ಭವನಗಳನ್ನು ಸಿಐಎಸ್‌ಎಫ್‌ ಪಡೆ ಸುಪರ್ದಿಗೆ ತೆಗೆದುಕೊಂಡಿದ್ದು, ಎಕ್ಸ್‌ರೇ ಯಂತ್ರಗಳನ್ನು ಬಳಸಿ ತಪಾಸಣೆ ನಡೆಸುವ ಕಾರ್ಯ ಆರಂಭಿಸಲಿದೆ. ಜೊತೆಗೆ ಸಂದರ್ಶಕರ ಶೂಗಳು, ಪರ್ಸ್‌, ಜಾಕೆಟ್‌ಗಳು, ಬೆಲ್ಟ್‌ಗಳನ್ನು ಪ್ರತ್ಯೇಕವಾದ ಟ್ರೇನಲ್ಲಿಟ್ಟು ಸ್ಕ್ಯಾನ್‌ ಮಾಡಲಾಗುತ್ತದೆ.

ಸಂಸತ್‌ ದಾಳಿ ಮಾಸ್ಟರ್‌ಮೈಂಡ್‌ ಮೈಸೂರಿನ ಮನೋರಂಜನ್‌..!

ಕಳೆದ ವರ್ಷ ಡಿ.13ರಂದು ಸಂಸತ್‌ ಭವನದಲ್ಲಿ ನಡೆದ ಭದ್ರತಾಲೋಪದ ಬಳಿಕ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಸತ್‌ ಭವನದ ರಕ್ಷಣೆಯ ಹೊಣೆಯನ್ನು ಸಿಐಎಸ್‌ಎಫ್‌ಗೆ ವಹಿಸಿತ್ತು. ಕೇಂದ್ರ ಗೃಹ ಸಚಿವಾಲಯದಡಿ ಕೆಲಸ ನಿರ್ವಹಿಸುವ ಸಿಐಎಸ್‌ಎಫ್‌ನಲ್ಲಿ 1.7 ಲಕ್ಷ ಮಂದಿ ಸಿಬ್ಬಂದಿಯಿದ್ದು, ಇವರು 68 ವಿಮಾನ ನಿಲ್ದಾಣಗಳು, ಅಣು ವಿದ್ಯುತ್‌ ಸ್ಥಾವರಗಳು ಸೇರಿದಂತೆ ಪ್ರಮುಖ ಸ್ಮಾರಕಗಳಿಗೆ ರಕ್ಷಣೆ ಒದಗಿಸುತ್ತಿದೆ.

ಇತಿಹಾಸದಲ್ಲೇ ಮೊದಲು: ರಾಜ್ಯದ ಮೂವರು ಸೇರಿ ಸಂಸತ್ತಿಂದ ಒಂದೇ ದಿನ ವಿಪಕ್ಷಗಳ 78 ಸದಸ್ಯರು ಸಸ್ಪೆಂಡ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ