ಏಕರೂಪ ನಾಗರಿಕ ಸಂಹಿತೆಗೆ 46 ಲಕ್ಷ ಅಭಿಪ್ರಾಯ ಸಲ್ಲಿಕೆ: ಶುಕ್ರವಾರ ಕಡೆ ದಿನ

Published : Jul 12, 2023, 12:14 PM IST
ಏಕರೂಪ ನಾಗರಿಕ ಸಂಹಿತೆಗೆ 46 ಲಕ್ಷ ಅಭಿಪ್ರಾಯ ಸಲ್ಲಿಕೆ: ಶುಕ್ರವಾರ ಕಡೆ ದಿನ

ಸಾರಾಂಶ

ಧರ್ಮಾತೀತವಾಗಿ ಎಲ್ಲರಿಗೂ ಒಂದೇ ರೀತಿಯ ವಿವಾಹ, ವಿಚ್ಛೇದನ, ಆಸ್ತಿ ಮೊದಲಾದ ಕಾನೂನು ಹೊಂದುವ ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಗೆ ಇದುವರೆಗೆ 46 ಲಕ್ಷ ಅಭಿಪ್ರಾಯಗಳು ಸಲ್ಲಿಕೆಯಾಗಿವೆ.

ನವದೆಹಲಿ: ಧರ್ಮಾತೀತವಾಗಿ ಎಲ್ಲರಿಗೂ ಒಂದೇ ರೀತಿಯ ವಿವಾಹ, ವಿಚ್ಛೇದನ, ಆಸ್ತಿ ಮೊದಲಾದ ಕಾನೂನು ಹೊಂದುವ ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಗೆ ಇದುವರೆಗೆ 46 ಲಕ್ಷ ಅಭಿಪ್ರಾಯಗಳು ಸಲ್ಲಿಕೆಯಾಗಿವೆ. ಕರಡು ವರದಿ ಬಿಡುಗಡೆಗೂ ಮುನ್ನ ಕೇಂದ್ರ ಕಾನೂನು ಆಯೋಗವು ಈ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಿತ್ತು. ಅದಕ್ಕೆ ಇದುವರೆಗೆ ದೇಶದ ಎಲ್ಲಾ ಭಾಗಗಳಿಂದ 46 ಲಕ್ಷ ಜನರು ಪ್ರತಿಕ್ರಿಯೆ ನೀಡಿದ್ದಾರೆ. ಜು.14 ಜನರಿಗೆ ಅಭಿಪ್ರಾಯ ಸಲ್ಲಿಕೆಗೆ ಇರುವ ಕಡೆಯ ದಿನವಾಗಿದೆ. ಬಳಿಕ ಇವುಗಳನ್ನು ಆಧರಿಸಿ ಆಯೋಗ ತನ್ನ ಕರಡು ವರದಿ ರೂಪಿಸಲಿದೆ.

ಏಕರೂಪ ಸಂಹಿತೆಗೆ ಬಿಜೆಪಿ ಮಿತ್ರ ಪಕ್ಷದಲ್ಲೇ ವಿರೋಧ

ಏಕರೂಪ ನಾಗರಿಕ ಸಂಹಿತೆ ಜಾರಿಯನ್ನು ಇದೀಗ ಬಿಜೆಪಿಯ ಮಿತ್ರ ಪಕ್ಷವೇ ವಿರೋಧಿಸಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಮೈತ್ರಿಕೂಟದಲ್ಲಿರುವ ಎಐಎಡಿಎಂಕೆ ಪಕ್ಷ ಏಕರೂಪ ಸಂಹಿತೆಗೆ ಸಂಬಂಧಿಸಿದಂತೆ ತನ್ನ ನಿಲುವಿಗೆ ಬದ್ಧವಾಗಿರುವುದಾಗಿ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷದ ಅಧ್ಯಕ್ಷ ಕೆ. ಪಳನಿಸ್ವಾಮಿ, ‘ನಾವು 2019ರ ನಮ್ಮ ಚುನಾವಣೆ ಪ್ರಣಾಳಿಕೆಯ ಬಿಡುಗಡೆ ಮಾಡುವ ಸಮಯದಲ್ಲೇ ಹೇಳಿದ್ದೇವೆ. ನಾವು ಜಾತ್ಯಾತೀತವಾಗಿದ್ದು, ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಿದ್ದೇವೆ. ಒಂದು ವೇಳೆ ಅದನ್ನು ಜಾರಿ ಮಾಡಿದರೆ ಅದು ಧರ್ಮವಾರು ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕಿಗೆ ಪರೋಕ್ಷವಾಗಿ ಪರಿಣಾಮ ಬೀರಲಿದೆ’ ಎಂದು ಹೇಳಿದ್ದಾರೆ.

ಏಕರೂಪ ಸಂಹಿತೆಯಿಂದ ಅಲ್ಪಸಂಖ್ಯಾತರ ಹೊರಗಿಡಿ: ಮುಸ್ಲಿಂ ಬೋರ್ಡ್‌

ಏಕರೂಪ ಸಂಹಿತೆ ಕುರಿತ ತನ್ನ ನಿಲುವಿಗೆ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಕೇವಲ ಬುಡಕಟ್ಟು ಜನಾಂಗ ಮಾತ್ರವಲ್ಲದೇ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರನ್ನು ಏಕರೂಪ ನಾಗರಿಕ ಸಂಹಿತೆಯಿಂದ ಹೊರಗಿಡಬೇಕು ಎಂದು ಮಂಡಳಿ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ವಕ್ತಾರ ಕಾಸಿಮ್‌ ರಸೂಲ್‌ ಇಲ್ಯಾಸ್‌ ಹೇಳಿದ್ದಾರೆ.

ಸಂವಿಧಾನವೇ ಏಕರೂಪವಲ್ಲ, ಯುನಿಫಾರ್ಮ್ ಸಿವಿಲ್ ಕೋಡ್‌ಗೆ ಮುಸ್ಲಿಂ ಲಾ ಬೋರ್ಡ್ ವಿರೋಧ!

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮೊದಲಿನಿಂದಲೂ ಏಕರೂಪ ಸಂಹಿತೆಗೆ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಭಾರತ ಹಲವು ಧರ್ಮ ಹಾಗೂ ಸಂಸ್ಕೃತಿಗಳನ್ನು ಹೊಂದಿರುವ ದೇಶವಾಗಿದೆ. ಹಾಗಾಗಿ ಇಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ರಸೂಲ್‌ ಹೇಳಿದ್ದಾರೆ. ಏಕರೂಪ ಸಂಹಿತೆಗೆ ಸಂಬಂಧಿಸಿದಂತೆ ಆಕ್ಷೇಪಗಳನ್ನು ಸಲ್ಲಿಸಲು ಕಾನೂನು ಆಯೋಗ ಜುಲೈ 14 ರವರೆಗೆ ಅವಕಾಶ ನೀಡಿದೆ. ಇದನ್ನು 6 ತಿಂಗಳಿಗೆ ವಿಸ್ತರಿಸುವಂತೆ ಈ ಮೊದಲು ಮುಸ್ಲಿಂ ಮಂಡಳಿ ಮನವಿ ಮಾಡಿತ್ತು.

ಏಕರೂಪ ನಾಗರಿಕ ಸಂಹಿತೆ ಬಗ್ಗೆ ನೆಹರೂ ಸಲಹೆ ಹಂಚಿಕೊಂಡ ಶಶಿ ತರೂರ್‌: ಕಾಂಗ್ರೆಸ್‌ ನಿಲುವು ಹೀಗಿದೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!