'ನಮ್ಮ ವಿಜ್ಞಾನಿಗಳ ಮೇಲೆ ನಂಬಿಕೆಯಿಲ್ಲದ ಮುಸ್ಲಿಮರು ಪಾಕ್‌ಗೆ ತೆರಳಬಹುದು'

Published : Jan 13, 2021, 06:18 PM ISTUpdated : Jan 13, 2021, 06:20 PM IST
'ನಮ್ಮ ವಿಜ್ಞಾನಿಗಳ ಮೇಲೆ ನಂಬಿಕೆಯಿಲ್ಲದ ಮುಸ್ಲಿಮರು ಪಾಕ್‌ಗೆ ತೆರಳಬಹುದು'

ಸಾರಾಂಶ

ದೇಶದ ವಿಜ್ಞಾನಿಗಳ ಮೇಲೆ ನಂಬಿಕೆ ಇಲ್ಲದವರು ಪಾಕಿಸ್ತಾನಕ್ಕೆ ಹೋಗಬಹುದು/ ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ/ ಕೆಲ ಮುಸ್ಲಿಮರು ಪ್ರಧಾನಿ, ವಿಜ್ಞಾನಿಗಳು ಮತ್ತು ಪೊಲೀಸರನ್ನು ನಂಬುವುದಿಲ್ಲ

ಬೆಂಗಳೂರು( ಜ.  13)  ಅತಿದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ಶುರುವಾಗಲು ಕಾಲ ಹತ್ತಿರವಾಗಿದೆ. ಇದೆಲ್ಲದರ ನಡುವೆ ವಿವಾದಾತ್ಮಕ ಹೇಳಿಕೆಗಳು ಹರಿದು ಬರುತ್ತಿವೆ.

ದೇಶದ ಕೆಲ ಮುಸಲ್ಮಾನನರಿಗೆ ಭಾರತದ ವಿಜ್ಞಾನಿಗಳ ಮೇಲೆ ನಂಬಿಕೆ ಇಲ್ಲ. ಅಂಥವರು ಧಾರಾಳವಾಗಿ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಬಿಜೆಪಿ ಶಾಸಕ ಸಂಗೀತ್ ಸೋಮ್  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಂಸ್ಕೃತ ಶ್ಲೋಕದೊಂದಿಗೆ ಗುರಿ ತಲುಪಿದ ಕೊರೋನಾ ಲಸಿಕೆ

ಕೆಲ ಮುಸ್ಲಿಮರಿಗೆ ವಿಜ್ಞಾನಿಗಳು ಮತ್ತು ಪೊಲೀಸರ ಮೇಲೆ ನಂಬಿಕೆ ಇಲ್ಲದಿರುವುದು ದುರ್ದೈವ. ಅವರಿಗೆ ಪ್ರಧಾನಿ ಮೇಲೆಯೂ ನಂಬುಗೆ ಇಲ್ಲ.  ಪಾಕಿಸ್ತಾದ ಮೇಲೆ ನಂಬಿಕೆ ಇದ್ದರೆ ಅಲ್ಲಿಗೆ ಹೋಗಬಹುದು ಎಂದು ಹೇಳಿದ್ದಾರೆ.

ದೆಹಲಿ ಸರ್ಕಾರದ ಮೇಲೆಯೂ ವಾಗ್ದಾಳಿ ಮಾಡಿದ ಶಾಸಕ ಕೇಜ್ರಿವಾಲ್ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ ಎಂದು ಆರೋಪಿಸಿದರು. ಪುಣೆಯಲ್ಲಿ ಸಿದ್ಧವಾದ ಲಸಿಕೆ ದೇಶದ ಹದಿಮೂರು ನಗರಗಳಿಗೆ ತಲುಪಿದ್ದು  ಲಸಿಕೆ ನೀಡಿಕೆ ಕಾರ್ಯ ಆರಂಭವಾಗಲಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!