
ನವದೆಹಲಿ(ಡಿ.26): ರೈತರ ಪ್ರತಿಭಟನೆ ಜೊತೆ ಧ್ವನಿಗೂಡಿಸಿರುವ ಕಾಂಗ್ರೆಸ್ ಪ್ರದಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ ವಿರುದ್ಧ ಮಾತನಾಡುವವರನ್ನು ಉಗ್ರ ಹಣೆಪಟ್ಟಿ ನೀಡಲಾಗುತ್ತಿದೆ ಎಂದಿದ್ದರು. ರಾಹುಲ್ ಗಾಂಧಿ ಟೀಕೆಗೆ, ಮೋದಿ ತಿರೇಗೇಟು ನೀಡಿದ್ದಾರೆ.
ಕೀಳು ರಾಜಕೀಯಕ್ಕೆ ರೈತರ ಬಲಿಕೊಡಬೇಡಿ; ದೀದಿ ಸೇರಿದಂತೆ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!
ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಪಿಎಂ ಜಯ್ ಶೆಹತ್ ಆಯುಷ್ಮಾನ್ ಭಾರತ್ ಯೋಜನೆ ಉದ್ಘಾಟಿಸಿದ ಮೋದಿ ಟೀಕೆಗೆ ಉತ್ತರಿಸಿದರು. ದೆಹಲಿಯಲ್ಲಿರುವ ಕೆಲವರು ಅವರ ಕಾಲಬುಡದಲ್ಲಿ ಪ್ರಜಾಪ್ರಭುತ್ವ ಕೊಳೆತುಹೋಗಿದ್ದರೂ, ನನಗೆ ಪ್ರಜಾಪ್ರಭುತ್ವದ ಪಾಠ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿಯನ್ನು ತಿವಿದಿದ್ದಾರೆ.
ನೇತಾಜಿ 125ನೇ ಜನ್ಮದಿನಾಚರಣೆ; ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ !
ಜಮ್ಮ ಮತ್ತು ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಜನರು ಮತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಿದ್ದ ವೇಳೆ, ಪುದುಚೇರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶವಿದ್ದರೂ, ಕಾಂಗ್ರೆಸ್ ಮುನ್ಸಿಪಲ್ ಹಾಗೂ ಪಂಚಾಯತ್ ಚುನಾವಣೆ ನಡೆಸಿಲ್ಲ. ಇದು ಯಾವ ಪ್ರಜಾಪ್ರಭುತ್ವ ಎಂದು ಮೋದಿ ಪ್ರಶ್ನಿಸಿದ್ದಾರೆ.
ಪ್ರದಾನಿ ಮೋದಿ ವಿರುದ್ಧ ಮಾತನಾಡುವವರನ್ನು ಉಗ್ರರೆಂಬಂತೆ ನೋಡಲಾಗುತ್ತಿದೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಮೋದಿ ವಿರುದ್ಧ ಮಾತನಾಡಿದರೆ ಉಗ್ರ ಹಣೆಪಟ್ಟಿ ಕಟ್ಟಲಾಗುತ್ತೆ ಎಂದು ರಾಹುಲ್ ಗಾಂಧಿ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ