ಅಭಿಮಾನಿಗಳ ಹಾರೈಕೆ: ಆಸ್ಪತ್ರೆಯಲ್ಲಿ ಎಸ್‌ಪಿಬಿ ಖುಷ್

Published : Aug 24, 2020, 09:31 PM IST
ಅಭಿಮಾನಿಗಳ ಹಾರೈಕೆ: ಆಸ್ಪತ್ರೆಯಲ್ಲಿ ಎಸ್‌ಪಿಬಿ ಖುಷ್

ಸಾರಾಂಶ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತರು ಖ್ಯಾತ ಗಾಯಕ ಎಎಸ್‌.ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯದ ಬಗ್ಗೆ ಪುತ್ರ  ಚರಣ್ ಮಾಹಿತಿ ನೀಡಿದ್ದಾರೆ.

ಚೆನ್ನೈ, (ಆ.24) : ನಮ್ಮ ತಂದೆಯ ಆರೋಗ್ಯ ಸದ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸದ್ಯ ಅವರಿಗೆ ಐಸಿಯುನಲ್ಲಿ‌ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ಜನಪ್ರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಪುತ್ರ ಚರಣ್  ಸ್ಪಷ್ಟಪಡಿಸಿದ್ದಾರೆ.

ನಾನು ಅವರನ್ನು ನೋಡಲು ತೆರಳಿದ್ದೆ, ಅವರನ್ನು ನನ್ನನ್ನು ನೋಡಿ ಗುರುತು ಹಿಡಿದರು. ಕೆಲ ಹೊತ್ತು ಮಾತನಾಡಿದೆ. ಅನೇಕರು ಆರೊಗ್ಯ ಚೇತರಿಕೆಗೆ ಪ್ರಾರ್ಥನೆ ಮಾಡಿದ್ರಿ. ಆಸ್ಪತ್ರೆಗೆ ಪ್ರಸಾದ ಕಳುಹಿಸಿದ್ದನ್ನು ಕೇಳಿ ತಂದೆಯವರು ಖುಷಿ ಪಟ್ಟರು ಎಂದು ಹೇಳಿದರು.

ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

ಕೊರೋನಾ ಸೋಂಕಿನ ಹಿನ್ನೆಲೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಎಸ್ ಪಿ ಬಾಲಸುಬ್ರಮಣ್ಯಂಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.  ಸೋಮವಾರ ಸಂಜೆ  ಅವರ ಆರೋಗ್ಯದ ಕುರಿತು ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ವೆಂಟಿಲೇಟೆರ್ ಮತ್ತು ಎಕ್ಮೋ ಮೆಷಿನ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ . ಜೊತೆಗೆ ನುರಿತ ತಜ್ಞರ ತಂಡ ಎಸ್ ಪಿ ಬಿ ಅವರ ಮೇಲೆ ತೀವ್ರ ನಿಗಾ ವಹಿಸಿದೆ ಎಂದು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ