ಸೋನಿಯಾ ಎಂಪಿ ನಿಧಿಯ 70% ಅಲ್ಪಸಂಖ್ಯಾತರಿಗೆ ಹಂಚಿಕೆ: ಅಮಿತ್‌ ಶಾ ಕಿಡಿ

Published : May 13, 2024, 06:03 AM IST
ಸೋನಿಯಾ ಎಂಪಿ ನಿಧಿಯ 70% ಅಲ್ಪಸಂಖ್ಯಾತರಿಗೆ ಹಂಚಿಕೆ: ಅಮಿತ್‌ ಶಾ ಕಿಡಿ

ಸಾರಾಂಶ

ಸಂಸದರ ನಿಧಿ ಬಳಕೆಯಲ್ಲೂ ಕಾಂಗ್ರೆಸ್‌ ಓಲೈಕೆ ರಾಜಕಾರಣ ಮಾಡಿದೆ ಎಂಬ ಗಂಭೀರ ಆರೋಪ ಮಾಡಿದೆ. ಜೊತೆಗೆ ಇಂಥದ್ದೊಂದು ಗಂಭೀರ ಆರೋಪವನ್ನು ಅದು ರಾಯ್‌ಬರೇಲಿ ಮಾಜಿ ಸಂಸದೆ, ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧವೇ ಮಾಡಿದೆ.

ರಾಯಬರೇಲಿ (ಮೇ.13): ಮುಸ್ಲಿಂ ಮೀಸಲು ವಿಷಯ ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ಧ ಸತತ ವಾಗ್ದಾಳಿ ನಡೆಸಿದ್ದ ಬಿಜೆಪಿ, ಇದೀಗ ಸಂಸದರ ನಿಧಿ ಬಳಕೆಯಲ್ಲೂ ಕಾಂಗ್ರೆಸ್‌ ಓಲೈಕೆ ರಾಜಕಾರಣ ಮಾಡಿದೆ ಎಂಬ ಗಂಭೀರ ಆರೋಪ ಮಾಡಿದೆ. ಜೊತೆಗೆ ಇಂಥದ್ದೊಂದು ಗಂಭೀರ ಆರೋಪವನ್ನು ಅದು ರಾಯ್‌ಬರೇಲಿ ಮಾಜಿ ಸಂಸದೆ, ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧವೇ ಮಾಡಿದೆ.

ಭಾನುವಾರ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮಾತನಾಡಿದ ಅಮಿತ್ ಶಾ, ‘ಶೆಹಜಾದಾ (ರಾಹುಲ್) ) ಮತ ಕೇಳಲು ಬಂದಿದ್ದಾರೆ. ಗಾಂಧೀ ಕುಟುಂಬಕ್ಕೆ ನೀವು ಹಲವು ವರ್ಷಗಳಿಂದ ಮತ ನೀಡುತ್ತಿದ್ದೀರಿ. ಸಂಸದರ ನಿಧಿಯಿಂದ ನಿಮಗೆ ಏನಾದರೂ ಸಿಕ್ಕಿದೆಯೇ..? ಏನೂ ಸಿಕ್ಕಿಲ್ಲ ಅಂದರೆ ಮತ್ತೆ ಎಲ್ಲಾ ಹಣ ಎಲ್ಲಿಗೆ ಹೋಯಿತು? ಅದು ಅವರ ಮತ ಬ್ಯಾಂಕ್‌ಗೆ ಹೋಗಿದೆ.  ಸೋನಿಯಾ ಗಾಂಧಿ ಸಂಸದರ ನಿಧಿಯ ಶೇ. 70 ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ನೀಡಿದ್ದಾರೆ’ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಪಿಒಕೆ ಮರುವಶ: ಅಮಿತ್‌ ಶಾ

ಇದೇ ವೇಳೆ ಕಾಂಗ್ರೆಸ್‌ನ ಮುಸ್ಲಿಂ ಓಲೈಕೆ ಬಗ್ಗೆ ತೀಕ್ಷ್ಣ ವಾಗ್ದಾಳಿ ಮುಂದುವರೆಸಿದ ಅಮಿತ್‌ ಶಾ, ‘ನಾವು ಮುಸ್ಲಿಂ ಮಹಿಳೆಯರ ಒಳಿತಿಗಾಗಿ ತ್ರಿವಳಿ ತಲಾಖ್‌ ರದ್ದುಪಡಿಸಿದರೆ, ಕಾಂಗ್ರೆಸ್‌ ಅದರ ಮರು ಜಾರಿಯ ಭರವಸೆ ನೀಡುತ್ತಿದೆ. ರಾಮಮಂದಿರಕ್ಕೆ ಆಹ್ವಾನ ನೀಡಿದರೂ ಅವರು ಬರಲಿಲ್ಲ. ಕಾರಣ ಅವರಿಗೆ ತಮ್ಮ ವೋಟ್‌ಬ್ಯಾಂಕ್‌ ಕಳೆದುಹೋಗುವ ಭೀತಿ ಇತ್ತು. ಕರ್ನಾಟಕ, ತೆಲಂಗಾಣದಲ್ಲಿ ಒಬಿಸಿ, ಎಸ್‌ಸಿ, ಎಸ್ಟಿ ಮೀಸಲು ಕಸಿದು ಮುಸ್ಲಿಮರಿಗೆ ನೀಡಿತು’ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು