ಅಕ್ರಮ ಹಣದಲ್ಲಿ ಲಂಡನ್‌ ಮನೆ ನವೀಕರಿಸಿದ ಸೋನಿಯಾ ಅಳಿಯ: ವಾದ್ರಾ ವಿರುದ್ಧ ಇ.ಡಿ. ಆರೋಪ

Published : Dec 27, 2023, 08:34 AM ISTUpdated : Dec 27, 2023, 08:36 AM IST
ಅಕ್ರಮ ಹಣದಲ್ಲಿ ಲಂಡನ್‌ ಮನೆ ನವೀಕರಿಸಿದ ಸೋನಿಯಾ ಅಳಿಯ:  ವಾದ್ರಾ ವಿರುದ್ಧ ಇ.ಡಿ. ಆರೋಪ

ಸಾರಾಂಶ

ಕಾಂಗ್ರೆಸ್‌ ವರಿಷ್ಠ, ಸೋನಿಯಾ ಗಾಂಧಿ ಅವರ ಅಳಿಯ, ಉದ್ಯಮಿ ರಾಬರ್ಟ್‌ ವಾದ್ರಾ ಅಕ್ರಮ ಹಣದಿಂದ ಲಂಡನ್‌ನಲ್ಲಿರುವ ತಮ್ಮ ಮನೆ ನವೀಕರಣ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.), ದೇಶಭ್ರಷ್ಟ ರಕ್ಷಣಾ ಮಧ್ಯವರ್ತಿ ಸಂಜಯ್‌ ಭಂಡಾರಿ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ನವದೆಹಲಿ: ಕಾಂಗ್ರೆಸ್‌ ವರಿಷ್ಠ, ಸೋನಿಯಾ ಗಾಂಧಿ ಅವರ ಅಳಿಯ, ಉದ್ಯಮಿ ರಾಬರ್ಟ್‌ ವಾದ್ರಾ ಅಕ್ರಮ ಹಣದಿಂದ ಲಂಡನ್‌ನಲ್ಲಿರುವ ತಮ್ಮ ಮನೆ ನವೀಕರಣ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.), ದೇಶಭ್ರಷ್ಟ ರಕ್ಷಣಾ ಮಧ್ಯವರ್ತಿ ಸಂಜಯ್‌ ಭಂಡಾರಿ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ಬ್ರಿಟನ್‌ನಲ್ಲಿ ನೆಲೆಸಿರುವ ಭಂಡಾರಿ ಅವರಿಗೆ ಸೇರಿದ ಅಕ್ರಮ ಹಣದಲ್ಲಿ ವಾದ್ರಾ ಪಾಲು ಪಡೆದುಕೊಂಡಿದ್ದಾರೆ. ಅದೇ ಹಣದಿಂದ ಲಂಡನ್‌ನ ತಮ್ಮ ಮನೆ ನವೀಕರಿಸಿ ಅಲ್ಲಿ ತಂಗಿದ್ದರು ಎಂದು ಹೊಸದಾಗಿ ಇ.ಡಿ. ಹೇಳಿದೆ. ಈ ಪ್ರಕರಣದಲ್ಲಿ ಹಿಂದೆ ವಾದ್ರಾ ಹೆಸರು ಪ್ರಸ್ತಾಪವಾಗಿದ್ದರೂ, ಚಾರ್ಜ್‌ಶೀಟಲ್ಲಿ ಅವರ ಹೆಸರಿನ ಉಲ್ಲೇಖ ಇದೇ ಮೊದಲು.

ಲೋಕಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ, ಗಂಡನಿಂದಲೇ ಸುಳಿವು

ಏನಿದು ಪ್ರಕರಣ?:

2016ರಲ್ಲಿ ಭಾರತ ತೊರೆದು ಹೋದ ಭಂಡಾರಿ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಇ.ಡಿ., 2017ರಲ್ಲಿ ಈತನ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಅಲ್ಲದೇ ಈ ಪ್ರಕರಣದಲ್ಲಿ ಇತರ ಆರೋಪಿಗಳಾದ ಚೆರುವತ್ತೂರ್‌ ಚಾಕುಟ್ಟಿ ಥಂಪಿ ಮತ್ತು ಸುಮಿತ್‌ ಚಧಾ ಅವರ ವಿರುದ್ಧವೂ ಪ್ರಕರಣ ದಾಖಲಿಸಿತ್ತು. 2020ರಲ್ಲಿ ಥಂಪಿಯನ್ನು ಬಂಧಿಸಿದ್ದ ಇ.ಡಿ. ಉಳಿದ ಆರೋಪಿಗಳಿಗೂ ನೋಟಿಸ್‌ ಜಾರಿ ಮಾಡಿತ್ತು.

ಪ್ರಸ್ತುತ ಜಾಮೀನಿನ ಮೇಲೆ ಹೊರಗಿರುವ ಥಂಪಿ, ರಾಬರ್ಟ್‌ ವಾದ್ರಾ ಅವರ ಆತ್ಮೀಯನಾಗಿದ್ದು, ಇವರಿಬ್ಬರ ನಡುವೆ ಹಣದ ವಹಿವಾಟು ನಡೆದಿದೆ ಎಂದು ಆರೋಪಿಸಿದೆ. ಈ ಹಿಂದೆ ಇ.ಡಿ. ವಾದ್ರಾ ವಿಚಾರಣೆ ನಡೆಸಿತ್ತು.

ರಾಬರ್ಟ್‌ ವಾದ್ರಾಗೆ ಬಿಗ್‌ ರಿಲೀಫ್‌, ಡಿಎಲ್‌ಎಫ್‌ ಲ್ಯಾಂಡ್‌ ಡೀಲ್‌ನ ದಾಖಲೆಗಳು ಪ್ರವಾಹದ ನೀರಿನಿಂದ ನಾಶ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ