Uttar Pradesh ಕೈಸರ್‌ಗಂಜ್‌ನಿಂದ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಡೌಟ್‌!

Published : May 02, 2024, 03:14 PM IST
Uttar Pradesh ಕೈಸರ್‌ಗಂಜ್‌ನಿಂದ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಡೌಟ್‌!

ಸಾರಾಂಶ

ದೇಶದ ಸಂಸತ್ತಿಗೆ ಗರಿಷ್ಠ ಸಂಖ್ಯೆಯ ಸಂಸದರನ್ನು ಕಳಿಸಿಕೊಡುವ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಎಲ್ಲಾ ಏಳೂ ಹಂತಗಳಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಏಪ್ರಿಲ್‌ 19 ಹಾಗೂ 26ಕ್ಕೆ ಎರಡು ಹತದ ಮತದಾನ ಇಲ್ಲಿ ನಡೆದಿದೆ.  


ನವದೆಹಲಿ (ಮೇ.2): ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕೈಸರ್‌ಗಂಜ್ ಹಾಲಿ ಸಂಸದ (ಎಂಪಿ) ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು ಅವರ ಮಗನನ್ನು ಸ್ಥಾನದಿಂದ ಕಣಕ್ಕೆ ಇಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೈಸರ್‌ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ ಅವರ ಕಿರಿಯ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಬಿಜೆಪಿ ಲೋಕಸಭಾ ಚುನಾವಣೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಈ ಹಿಂದೆ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರನ್ನು ಘೋಷಿಸಲು ವಿಳಂಬವಾಗುತ್ತಿರುವುದಕ್ಕೆ ಮಾಧ್ಯಮಗಳೇ ಕಾರಣ ಎಂದಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, "ಟಿಕೆಟ್‌ನ ಚಿಂತೆ ನನ್ನದು, ನೀವು (ಮಾಧ್ಯಮ) ಮತ್ತು ಜನರು ಚಿಂತಿಸಬೇಕಾಗಿಲ್ಲ, ನಿಮ್ಮಿಂದಾಗಿ ನನ್ನ ಅಭ್ಯರ್ಥಿಯ ಘೋಷಣೆ ವಿಳಂಬವಾಗುತ್ತಿದೆ" ಎಂದು ಹೇಳಿದ್ದರು. ಮೇ 20 ರಂದು (ಸೋಮವಾರ) ಐದನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾನ ನಡೆಯಲಿರುವ ಕೈಸರ್‌ಗಂಜ್‌ನಿಂದ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.

2019 ರ ಚುನಾವಣೆಯಲ್ಲಿ ಬ್ರಿಜ್ ಭೂಷಣ್ 5,81,358 ಮತಗಳನ್ನು ಪಡೆದಿದ್ದರೆ, ಬಿಎಸ್ಪಿಯ ಚಂದ್ರದೇವ್ ರಾಮ್ ಯಾದವ್ 3,19,757 ಮತ್ತು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಪಾಂಡೆ 3,7132 ಮತಗಳನ್ನು ಪಡೆದಿದ್ದರು.

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಇಂದು (ಮೇ 2) ಕೈಸರ್‌ಗಂಜ್ ಲೋಕಸಭಾ ಸ್ಥಾನಕ್ಕೆ ನರೇಂದ್ರ ಪಾಂಡೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಇದುವರೆಗೆ ಸುಮಾರು 50 ಅಭ್ಯರ್ಥಿಗಳನ್ನು ಘೋಷಿಸಿದೆ. ಒಂದು ಮತ್ತು ಎರಡು ಹಂತದ ಮತದಾನ ಪೂರ್ಣಗೊಂಡಿದ್ದು, ಮೂರನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಬ್ರಿಜ್‌ಭೂಷಣ್‌ರನ್ನು ಅಧಿಕಾರದಿಂದ ದೂರವಿಡಿ: ಪ್ರಧಾನಿಗೆ ವಿನೇಶ್‌ ಒತ್ತಾಯ

ನ್ನೊಂದು ಪ್ರಶ್ನೆಗೆ ಉತ್ತರ ನೀಡುತ್ತಾ, ಮಾಜಿ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ, ಈದ್ ಆಚರಿಸಲು ಮುಸ್ಲಿಮರನ್ನು ಭೇಟಿ ಮಾಡುವುದು ಮತ್ತು ಅವರ ಮನೆಗೆ ಭೇಟಿ ನೀಡುವುದು ಅಪರಾಧವಲ್ಲ ಎಂದು ಹೇಳಿದರು. ನಾನು ಯಾವತ್ತೂ ಧರ್ಮದ ಆಧಾರದಲ್ಲಿ ರಾಜಕೀಯ ಮಾಡಿಲ್ಲ ಎಂದ ಅವರು, ಎಲ್ಲವನ್ನೂ ರಾಜಕೀಯದೊಂದಿಗೆ ಜೋಡಿಸಬೇಡಿ ಎಂದು ಸುದ್ದಿಗಾರರಿಗೆ ಮನವಿ ಮಾಡಿದರು. ಜಾತಿ, ಧರ್ಮ, ಪಂಗಡಗಳ ಆಧಾರದ ಮೇಲೆ ಸಮಾಜವನ್ನು ವಿಭಜಿಸಿ ನಾನು ರಾಜಕೀಯ ಮಾಡುವುದಿಲ್ಲ ಎಂದರು.

ಕುಸ್ತಿ ಸಮಸ್ಯೆ ಪರಿಹರಿಸಿ: ಜಾಗತಿಕ ಸಂಸ್ಥೆಯ ಮೊರೆ ಹೋದ ಭಾರತದ ರೆಸ್ಲರ್ಸ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ