Breaking: ಚೆನ್ನೈ ಆಸ್ಪತ್ರೆಗೆ ದಾಖಲಾದ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

Published : Nov 26, 2024, 09:34 AM ISTUpdated : Nov 26, 2024, 09:43 AM IST
Breaking: ಚೆನ್ನೈ ಆಸ್ಪತ್ರೆಗೆ ದಾಖಲಾದ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

ಸಾರಾಂಶ

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆಸಿಡಿಟಿ ಸಮಸ್ಯೆಯಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆತಂಕಕ್ಕೆ ಕಾರಣವಿಲ್ಲ ಮತ್ತು ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಆರ್‌ಬಿಐ ತಿಳಿಸಿದೆ.

ನವದೆಹಲಿ (ನ.26): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಸಣ್ಣ ಆರೋಗ್ಯ ಸಮಸ್ಯೆಯಿಂದ ಮಂಗಳವಾರಮುಂಜಾನೆ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದ್ದು, ತಮಿಳುನಾಡು ರಾಜಧಾನಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಅವರ ಆರೋಗ್ಯದ ಕುರಿತು ಅಪ್‌ಡೇಟ್‌ನೀಡಿರುವ ಕೇಂದ್ರ ಬ್ಯಾಂಕ್, ಆತಂಕಕ್ಕೆ ಯಾವುದೇ ಕಾರಣವಿಲ್ಲ ಮತ್ತು ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್‌ ಮಾಡಲಾಗುತ್ತದೆ ಎಂದು ಹೇಳಿದೆ. “ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ತೀವ್ರವಾದ ಆಸಿಡಿಟಿ ಸಮಸ್ಯೆ ಅನುಭವಿಸಿದ್ದರು. ಅಬ್ಸರ್ವೇಷನ್‌ಗಾಗಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಈಗ ಆರೋಗ್ಯವಾಗಿದ್ದಾರೆ ಮತ್ತು ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.

ಬಾಹ್ಯಾಕಾಶದಲ್ಲಿ ಸ್ಪೇಸ್‌ ಜಾನಿಟರ್‌ ಆದ ಸುನೀತಾ ವಿಲಿಯಮ್ಸ್‌, ISS ಬಾತ್‌ರೂಮ್‌ ಕ್ಲೀನ್‌ ಮಾಡಿದ ಗಗನಯಾತ್ರಿ!

ಬೆವರು, ಮೂತ್ರ ಸಂಸ್ಕರಿಸಿದ ನೀರಿನಿಂದ ಮಾಡಿದ ಸೂಪ್‌ ಕುಡಿದು ದಿನ ಕಳೆಯುತ್ತಿರುವ ಸುನೀತಾ ವಿಲಿಯಮ್ಸ್‌!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ