
ನವದೆಹಲಿ(ಅ.21): ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಉಗ್ರರ ಸಂಹಾರ ಮುಂದುವರೆದಿದ್ದು, ಮಂಗಳವಾರ ಪುಲ್ವಾಮಾ ಮತ್ತು ಶೋಪಿಯಾನ್ನಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಸೇನೆ ಸಂಹಾರ ಮಾಡಿದೆ.
ಉಗ್ರರು ಅಡಗಿ ಕುಳಿತ ಖಚಿತ ಮಾಹಿತಿ ಮೇರೆಗೆ ಸೇನೆ ಸೋಮವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್ನಲ್ಲಿ ಶೋಧಕಾರ್ಯ ಆರಂಭಿಸಿತ್ತು. ಈ ವೇಳೆ ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಸೋಮವಾರ ಒಬ್ಬ ಉಗ್ರ, ಮಂಗಳವಾರ ಮುಂಜಾನೆ ಮತ್ತೊಬ್ಬ ಉಗ್ರ ಎನ್ಕೌಂಟರ್ಗೆ ಬಲಿಯಾಗಿದ್ದ.
ಇತ್ತ ಪುಲ್ವಾಮಾದಲ್ಲಿ ನಡೆದ ಮತ್ತೊಂದು ಉಗ್ರ ಕಾರಾರಯಚರಣೆಯಲ್ಲಿ ಮಂಗಳವಾರ ಮೂವರು ಉಗ್ರರು ಹತರಾಗಿದ್ದಾರೆ. ಈ ಮೂಲಕ 2 ದಿನದಲ್ಲಿ ಸೇನೆ ಐವರು ಭಯೋತ್ಪಾದಕರನ್ನು ಸಂಹಾರ ಮಾಡಿದೆ. ಉಗ್ರರ ಬಳಿ ಇದ್ದ ಎಕೆ 47, ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ