
ನವದೆಹಲಿ[ಡಿ.13]: ದಿನನಿತ್ಯ ಸಂಸ್ಕೃತದಲ್ಲಿ ಮಾತನಾಡುವುದರಿಂದ ಮನುಷ್ಯನ ನರಮಂಡಲದ ಸಾಮರ್ಥ್ಯ ವೃದ್ಧಿಯಾಗುತ್ತದೆ ಹಾಗೂ ಮಧುಮೇಹ ಮತ್ತು ಕೊಬ್ಬು ನಿಯಂತ್ರಣಕ್ಕೂ ಇದು ಸಹಕಾರಿಯಾಗಲಿದೆ ಎಂಬುದು ಅಮೆರಿಕದ ಸಂಶೋಧನೆಯೊಂದರಿಂದ ರುಜುವಾತಾಗಿದೆ ಎಂದು ಬಿಜೆಪಿ ಸಂಸದ ಗಣೇಶ್ ಸಿಂಗ್ ಹೇಳಿದ್ದಾರೆ.
ಸಂಸ್ಕೃತ ವಿವಿಗಳ ಮಸೂದೆ ಮೇಲಿನ ಚರ್ಚೆಯಲ್ಲಿ ಮಾತನಾಡಿ,‘ಸಂಸ್ಕೃತದಲ್ಲಿ ಕಂಪ್ಯೂಟರ್ ಪ್ರೋಗ್ರಾಂ ಮಾಡಿದಲ್ಲಿ, ದೋಷರಹಿತವಾಗಿರುತ್ತವೆ ಎಂಬುದಾಗಿ ಅಮೆರಿಕದ ನಾಸಾ ಪ್ರತಿಪಾದಿಸಿದೆ’ ಎಂದರು.
ಏತನ್ಮಧ್ಯೆ, ಆಂಗ್ಲಭಾಷೆಯ ಬ್ರದರ್(ಸೋದರ) ಹಾಗೂ ಕೌ(ದನ) ಎಂಬ ಪದಗಳು ಸಂಸ್ಕೃತದಿಂದಲೇ ಹುಟ್ಟಿಕೊಂಡಿವೆ ಎಂದು ಸಚಿವ ಪ್ರತಾಪ್ ಚಂದ್ರ ಸಾರಂಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ