BJPಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ; ಹೊಸ ಆಂದೊಲನ ಆರಂಭಿಸಿದ ರಾಹುಲ್ ಗಾಂಧಿ!

Published : Jul 26, 2020, 07:22 PM IST
BJPಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ; ಹೊಸ ಆಂದೊಲನ ಆರಂಭಿಸಿದ ರಾಹುಲ್ ಗಾಂಧಿ!

ಸಾರಾಂಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಬಿಜೆಪಿ ವಿರುದ್ದ ಹೊಸ ಸಮರ ಸಾರಿದ್ದಾರೆ. ಬಿಜೆಪಿ ಸರ್ಕಾರ ಕೊರೋನಾ ವೈರಸ್ ನಿಯಂತ್ರಣ ಹಾಗೂ ಚೀನಾ ಆಕ್ರಮಣ ತಡೆಯಲು ವಿಫಲವಾಗಿದೆ ಎಂಬ ಆರೋಪಗಳ ಬಳಿಕ ಇದೀಗ ಬಿಜೆಪಿ ವಿರುದ್ಧ ಆಂದೋಲನ ಆರಂಭಿಸಿದ್ದಾರೆ. ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಎತ್ತಿ ಎಂದು ರಾಹುಲ್ ಕರೆ ನೀಡಿದ್ದಾರೆ  

ನವದೆಹಲಿ(ಜು.26): ಬಿಜೆಪಿ ಪ್ರಜಾಪ್ರಭುತ್ವ ಕಗ್ಗೂಲೆ ಮಾಡುತ್ತಿದೆ. ಪ್ರಜಾಪ್ರಭುತ್ವದ ಬದಲು ಸರ್ವಾಧಿಕಾರ ಆಡಳಿತ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕಾಗಿ ಭಾರತದ ಪ್ರಜೆಗಳು ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಎತ್ತಬೇಕು ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ #SpeakUpForDemocracy ಎಂಬ ಅಭಿಯಾನ ಆರಂಭಿಸಿದ್ದಾರೆ.

 

ಯುವ ಪಡೆ ಕೈಕೊಟ್ಟರೆ ನಷ್ಟವಿಲ್ಲ: ಸಿಂಧಿಯಾ, ಪೈಲಟ್‌ಗೆ ರಾಹುಲ್‌ ಟಾಂಗ್‌!.

ರಾಜಸ್ಥಾನದಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನೇ ಸಾಯಿಸಿದೆ. ಮಧ್ಯ ಪ್ರದೇಶದಲ್ಲಿ ಸರ್ವಾಧಿಕಾರದ ಹಾಗೂ ಅಡ್ಡ ದಾರಿ ಬಳಸಿದ ಬಿಜೆಪಿ ಇದೀಗ ರಾಜಸ್ಥಾನದಲ್ಲಿ ಇದೇ ದಾರಿ ಅನುಸರಿಸುತ್ತಿದೆ. 2018ರಲ್ಲಿ ರಾಜಸ್ಥಾನ ಜನತೆ ಕಾಂಗ್ರೆಸ್ ಆಯ್ಕೆ ಮಾಡಿದೆ. ಆದರೆ ಇದೀಗ ಬಿಜೆಪಿ ಹಿಂಬಾಗಿಲ ಮೂಲಕ ರಾಜಸ್ಥಾನದಲ್ಲಿ ಅಧಿಕಾರ ಹಿಡಿಯಲು ಮುಂದಾಗಿದೆ ಎಂದುು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೋದಿಯನ್ನು ಚೀನಾ ಹೊಗಳೋದೇಕೆ?: ರಾಹುಲ್‌ ಪ್ರಶ್ನೆ!

ಬಿಜೆಪಿಯ ನಡೆಯನ್ನು ಜನರು ಪ್ರಶ್ನಿಸಬೇಕು. ಜನರಿಂದ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ನಿಲ್ಲಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರ. ಇದಕ್ಕಾಗಿ #SpeakUpForDemocracy ಆಂದೋಲನ ಆರಂಭಿಸಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!