ನವದೆಹಲಿ(ಫೆ.14): ನೂತನ ಕೃಷಿ ಕಾಯ್ದೆಗಳ ಕುರಿತು ಸರ್ಕಾರ ರೈತರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎಂಬ ಆರೋಪಗಳು ಕೇಳಿಬಂದಿರುವಾಗಲೇ, ಕೃಷಿ ಕಾಯ್ದೆಗಳ ಕುರಿತು ಸ್ಪಷ್ಟನೆಗಳನ್ನು ನೀಡಲು ಹಾಗೂ ಸಾಕ್ಷ್ಯಚಿತ್ರಗಳ ನಿರ್ಮಾಣಕ್ಕಾಗಿ 8 ಕೋಟಿ ರು.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಕೃಷಿ ಕಾಯ್ದೆಗಳನ್ನು ಜಾರಿ ಮಾಡುವುದಕ್ಕೂ ಮುನ್ನ ರಾಜ್ಯಗಳ ಜೊತೆ ಸಮಾಲೋಚನೆ ಮಾಡಲಾಗಿತ್ತು. ಆದರೆ, ಪ್ರಚಾರಕ್ಕೋಸ್ಕರ ಕಾಯ್ದೆಯ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ.
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಂವಹನ ವಿಭಾಗ ತಮ್ಮ ಸಚಿವಾಲಯದ ಪರವಾಗಿ 2020ರ ಸೆಪ್ಟೆಂಬರ್ನಿಂದ ಜ.2021ರ ಅವಧಿಯಲ್ಲಿ 7.25 ಕೋಟಿ ರು.ಗಳ ಜಾಹೀರಾತುಗಳನ್ನು ಬಿಡುಗಡೆ ಮಾಡಿದೆ. ಹಿಂದಿ, ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಗಳ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ಈ ಹಣವನ್ನು ಬಳಕೆ ಮಾಡಲಾಗಿದೆ. ಅದೇ ರೀತಿ ಕೃಷಿ ಕಾಯ್ದೆಗಳ ಪ್ರಚಾರಕ್ಕೆ ಮೂರು ಸಾಕ್ಷ್ಯಚಿತ್ರಗಳು ಮತ್ತು ಕಾಯ್ದೆಗಳ ಬಗ್ಗೆ ಶೈಕ್ಷಣಿಕ ಮಾಹಿತಿ ನೀಡುವ 2 ಚಿತ್ರಗಳು ಮತ್ತು ಟೀವಿ ಮಾಧ್ಯಮದಲ್ಲಿ ಪ್ರಚಾರಕ್ಕಾಗಿ 68 ಲಕ್ಷ ರು.ಗಳನ್ನು ಖರ್ಚು ಮಾಡಲಾಗಿದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ