
ಮುಂಬೈ (ಸೆ.12): ವಿಮಾನ ಟೇಕ್ಆಫ್ ಆದ ಬಳಿಕ ಅದರ ಚಕ್ರಗಳು ರನ್ವೇನಲ್ಲಿ ಪತ್ತೆಯಾಗಿದ್ದ ಕಾರಣದಿಂದ ಮುಂಬೈ ಏರ್ಪೋರ್ಟ್ನಲ್ಲಿ ಪೂರ್ಣ ಪ್ರಮಾಣದ ತುರ್ತುಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಕಾಂಗ್ಲಾ ಹಾಗೂ ಮುಂಬೈ ನಡುವೆ ಸಂಚಾರ ಮಾಡುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಚಕ್ರಗಳು ಟೇಕ್ಆಫ್ ಆಗುವ ವೇಳೆ ಬಿದ್ದು ಹೋಗಿದ್ದವು. ಕಾಂಡ್ಲಾದಿಂದ ವಿಮಾನ ಮುಂಬೈಗೆ ಹೊರಟಿತ್ತು. ಕಾಂಡ್ಲಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಚಕ್ರಗಳು ಪತ್ತೆಯಾಗಿದ್ದರಿಂದ ಮುಂಬೈ ಏರ್ಪೋರ್ಟ್ಗೆ ಅಲರ್ಟ್ ನೀಡಲಾಗಿತ್ತು. ಇದರಿಂದಾಗಿ ಮುಂಬೈ ಏರ್ಪೋರ್ಟ್ ಸಂಜೆ 5 ಗಂಟೆಯ ವರೆಗೆ ತುರ್ತುಪರಿಸ್ಥಿತಿ ಘೋಷಣೆ ಮಾಡಿತ್ತು. ಆದರೆ, ಅದೃಷ್ಟವಶಾಪ್ ಸ್ಪೈಸ್ ಜೆಟ್ ವಿಮಾನ ಸೇಫ್ ಆಗಿ ಲ್ಯಾಂಡ್ ಆಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಸ್ಪೈಸ್ ಜೆಟ್ ವಿಮಾನ ಲ್ಯಾಂಡ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೆಟ್ ವಿಮಾನ ಲ್ಯಾಂಡ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ