ಫಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವ; ಆ.29ಕ್ಕೆ ಫಿಟ್ ಇಂಡಿಯಾ ಮೊಬೈಲ್ ಆ್ಯಪ್ ಗೆ ಚಾಲನೆ!

Published : Aug 26, 2021, 08:57 PM IST
ಫಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವ; ಆ.29ಕ್ಕೆ ಫಿಟ್ ಇಂಡಿಯಾ ಮೊಬೈಲ್ ಆ್ಯಪ್ ಗೆ ಚಾಲನೆ!

ಸಾರಾಂಶ

ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಭಾಗವಾಗಿ ವಿಶೇಷ ಕಾರ್ಯಕ್ರಮ ಫಿಟ್ ಇಂಡಿಯಾ ಚಳವಳಿಯ 2ನೇ ವಾರ್ಷಿಕೋತ್ಸವ

ನವದೆಹಲಿ(ಆ.26):  ಫಿಟ್ ಇಂಡಿಯಾ ಚಳವಳಿಯ 2ನೇ ವಾರ್ಷಿಕೋತ್ಸವ ಆಚರಣೆ ಮತ್ತು ಆಜಾದಿ ಕಾ ಅಮೃತಮಹೋತ್ಸವದ ಭಾಗವಾಗಿ ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆಗಸ್ಟ್ 29 ರಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಫಿಟ್ ಇಂಡಿಯಾ ಮೊಬೈಲ್ ಆ್ಯಪ್ ಗೆ ಚಾಲನೆ ನೀಡಲಿದ್ದಾರೆ. 

ಭಾರತಕ್ಕೆ 75ನೇ ಸ್ವಾತಂತ್ರ್ಯ ಸಂಭ್ರಮ: ರಾಷ್ಟ್ರಗೀತೆಗೆ ಧ್ವನಿಯಾದ ಕ್ರೀಡಾ ತಾರೆಯರು!

ದೆಹಲಿಯ  ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ  ಭಾರತೀಯ ಹಾಕಿ ತಂಡದ ನಾಯಕ ಮನಪ್ರೀತ್ ಸಿಂಗ್, ಕುಸ್ತಿಪಟು ಸಂಗ್ರಾಮ್ ಸಿಂಗ್, ಕಾರ್ಯಕ್ರಮದಲ್ಲಿ ವರ್ಚುವಲ್ ರೂಪದಲ್ಲಿ ಭಾಗಿವಹಿಸಲಿದ್ದಾರೆ. ಆ್ಯಪ್ ಬಿಡುಗಡೆ ನಂತರ ಅಯಾಮ್ ಮೆಮೂನ್ ಮತ್ತು ಕ್ಯಾಪ್ಟನ್ ಅನ್ನಿ ದಿವ್ಯ, ಶಾಲಾ ವಿದ್ಯಾರ್ಥಿನಿ ಹಾಗೂ ಗೃಹಿಣಿ ಫಿಟ್ ಇಂಡಿಯಾ ಆ್ಯಪ್ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. 

ಫಿಟ್ ಇಂಡಿಯಾ ಆ್ಯಪ್ ಆಂಡ್ರಾಯಿಡ್ ಮತ್ತು ಐಒಎಸ್ ವೇದಿಕೆಗಳೆರಡರಲ್ಲೂ ಲಭ್ಯವಿದೆ ಮತ್ತು ಬೇಸಿಕ್ ಸ್ಮಾರ್ಟ್ ಪೋನ್ ಗಳಲ್ಲೂ ಅದು ಕಾರ್ಯನಿರ್ವಹಿಸುವಂತೆ ಗಮನದಲ್ಲಿರಿಸಿಕೊಂಡು ರೂಪಿಸಲಾಗಿದೆ. ಆಗಸ್ಟ್ 29ರ ನಂತರ ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆ್ಯಪ್ ಸ್ಟೋರ್ ನಿಂದ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದು ಮತ್ತು ಫಿಟ್ ಇಂಡಿಯಾ ಪೇಸ್ ಬುಕ್ ಪೇಜ್ ಮೂಲಕ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಬಹುದು. 

ಸ್ವಾತಂತ್ರ್ಯ ಅಮೃತ ಮಹೋತ್ಸವದ ರಂಗು ಹೆಚ್ಚಿಸಿದ ಟೋಕಿಯೋ ಒಲಿಂಪಿಕ್ಸ್ ಸಾಧಕರು..!

ಭಾರತವನ್ನು ಸಧೃಢ ಮತ್ತು ಆರೋಗ್ಯಕರ ರಾಷ್ಟ್ರವನ್ನಾಗಿ ಮಾಡುವ ದೂರದೃಷ್ಟಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ಆಗಸ್ಟ್ 29ರಂದು  ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಕಳೆದ ಎರಡು ವರ್ಷಗಳಿಂದೀಚೆಗೆ, ಫಿಟ್ ಇಂಡಿಯಾ ಶಾಲಾ ಸಪ್ತಾಹ, ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ, ಫಿಟ್ ಇಂಡಿಯಾ ಆ ಸೈಕ್ಲಥಾನ್ ಮತ್ತಿತರ ಹಲವು ಸದೃಢ ಅಭಿಯಾನಗಳ ಮೂಲಕ ಫಿಟ್ ಇಂಡಿಯಾ ಚಳವಳಿ ದೇಶಾದ್ಯಂತ ಲಕ್ಷಾಂತರ ಜನರನು ತಲುಪಿದೆ.

ಸದ್ಯ ಫಿಟ್ ಇಂಡಿಯಾ ಚಳವಳಿಯಲ್ಲಿ, ದೇಶ ಸ್ವಾತಂತ್ರ್ಯಗಳಿಸಿದ 75 ವರ್ಷದ ನೆನಪಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ‘ಆಜಾದಿ ಕಾ ಅಮೃತ ಮಹೋತ್ಸವ’ ಆಚರಣೆ ಭಾಗವಾಗಿ ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ 2.0 ಕೂಡ ನಡೆಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?