ಬಿಜೆಪಿ ತೊರೆದ ಶ್ರೀರಾಮುಲು ತಂಗಿ ಶಾಂತಾ, ಬಳ್ಳಾರಿ ಬಿಟ್ಟು ಆಂಧ್ರದ ವೈಎಸ್‌ಆರ್‌ನಿಂದ ಲೋಕಸಭೆಗೆ ಸ್ಪರ್ಧೆ!

Published : Jan 02, 2024, 09:40 PM IST
ಬಿಜೆಪಿ ತೊರೆದ ಶ್ರೀರಾಮುಲು ತಂಗಿ ಶಾಂತಾ, ಬಳ್ಳಾರಿ ಬಿಟ್ಟು ಆಂಧ್ರದ ವೈಎಸ್‌ಆರ್‌ನಿಂದ ಲೋಕಸಭೆಗೆ ಸ್ಪರ್ಧೆ!

ಸಾರಾಂಶ

ಕರ್ನಾಟಕ ಚುನಾವಣೆಯಲ್ಲಿ ಸೋಲುಂಡ ಮಾಜಿ ಸಚಿವ ಶ್ರೀರಾಮುಲು ತಂಗಿ ಜೆ.ಶಾಂತಾ ಅವರು ಲೋಕಸಭಾ ಚುನಾವಣೆಗೆ ಮುಂಚೆಯೇ ಬಿಜೆಪಿ ತೊರೆದಿದ್ದಾರೆ.

ಬಳ್ಳಾರಿ (ಜ.02): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತವರು ಕ್ಷೇತ್ರದಲ್ಲಿಯೇ ಸೋಲುಂಡ ಮಾಜಿ ಸಚಿವ ಶ್ರೀರಾಮುಲು ಅವರ ತಂಗಿ ಮಾಜಿ ಸಂಸದೆ ಜೆ.ಶಾಂತಾ ಅವರು ಲೋಕಸಭಾ ಚುನಾವಣೆಯ ಬೆನ್ನಲ್ಲಿಯೇ ಬಿಜೆಪಿಯನ್ನು ತೊರೆದಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕಾರಣವನ್ನು ಬಿಜೆಪಿ ವಿರೋಧಿಸುತ್ತದೆಯಾದರೂ 2009ರಲ್ಲಿ ಶ್ರೀರಾಮುಲು ಅವರ ಸಹೋದರಿ ಜೆ.ಶಾಂತಾ ಅವರಿಗೆ ಬಳ್ಳಾರಿ ಲೋಕಸಭೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿ ಗೆಲ್ಲಿಸಿ ಸಂಸತ್‌ಗೆ ಕಳುಹಿಸಲಾಗಿತ್ತು. ಇದಾದ ನಂತರ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರ ನಡುವಿನ ವೈಮನಸ್ಸಿನ ನಡುವೆ ಮತ್ತೊಮ್ಮೆ ಜೆ.ಶಾಂತಾ ಅವರು ಬಳ್ಳಾರಿಯಿಂದ ಸ್ಪರ್ಧೆ ಮಾಡಿದರೂ ಅವರಿಗೆ ಗೆಲುವು ಸಿಕ್ಕಿರಲಿಲ್ಲ. ಈಗ ಪುನಃ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್‌ ಆರಂಭಿಸಲು ಮುಂದಾಗಿರುವ ಮಾಜಿ ಸಂಸದೆ ಜೆ. ಶಾಂತಾ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿಯಿಂದ ಸ್ಪರ್ಧಿಸಿ ಸೋತು ಸುಣ್ಣವಾಗಿರುವ ಅಣ್ಣ ಶ್ರೀರಾಮುಲು ಇರುವ ಪಕ್ಷವನ್ನು ತೊರೆದಿದ್ದಾರೆ.

ಮಗಳ ಮದುವೆ ಸ್ವಾಗತ ಮೆರವಣಿಗೆಯಲ್ಲಿ ಶ್ರೀರಾಮುಲು ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್!

ಆಂಧ್ರದಲ್ಲಿ ವೈಎಸ್‌ಆರ್‌ ಸೇರ್ಪಡೆ: ತವರೂರು ಬಳ್ಳಾರಿಯಿಂದ ಸ್ಪರ್ಧಿಸಿ ರಾಜಕೀಯ ನೆಲೆ ಕಂಡುಕೊಂಡಿದ್ದ ಜೆ. ಶಾಂತಾ ಈಗ, ರಾಜ್ಯದಲ್ಲಿ ತಮಗೆ ನೆಲೆ ಇಲ್ಲವೆಂದು ಖಚಿತವಾಗುತ್ತಿದ್ದಂತೆ ಅವರು ಬಿಜೆಪಿ ಹಾಗೂ ಕರ್ನಾಟಕ ರಾಜ್ಯವನ್ನೇ ತೊರೆದು ಆಂಧ್ರಪ್ರದೇಶ ರಾಜಕಾರಣದತ್ತ ವಾಲಿದ್ದಾರೆ. ಆಂಧ್ರ ಪ್ರದೇಶದಲ್ಲಿ ಪ್ರಾದೇಶಿಕ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ ಪ್ರಭಲವಾಗಿದ್ದು, ಈ ಸ್ಥಳೀಯ ಪಕ್ಷದಡಿಯೇ ಸ್ಪರ್ಧೆ ಮಾಡುವುದಕ್ಕೆ ಮುಂದಾಗಿದ್ದಾರೆ. ಆದ್ದರಿಂದ, ವೈಎಸ್‌ಆರ್‌ ಕಾಂಗ್ರೆಸ್‌ ಸಂಸ್ಥಾಪಕರೂ ಆಗಿರುವ ಆಂಧ್ರಪ್ರದೇಶದ ಮುಖ್ಯಂತ್ರಿ ವೈ.ಎಸ್. ಜಗನ್‌ ಅವರ ಸಮ್ಮುಖದಲ್ಲಿ ವೈಎಸ್‌ಆರ್‌ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

ಭಿಕ್ಷೆ ಬೇಡುವ ಬಾಲಕಿಯನ್ನೂ ಬಿಡದೇ ಕಾರಿನಲ್ಲಿ ಕೈಕಾಲು ಕಟ್ಟಿ ಎತ್ತಾಕೊಂಡೋದ ಕೇರಳದ ಕಾಮಿಷ್ಟರು!

ಈ ಕುರಿತು ಶ್ರೀರಾಮುಲು ಸಹೋದರಿ ವೈಎಸ್ ಆರ್ ಸೇರ್ಪಡೆ ಕುರಿತು ಕಳೆದ ವಾರವೇ ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು. ಈಗ ವೈಎಸ್‌ಆರ್‌ ಸೇರ್ಪಡೆಯಾಗಿರುವ ಜೆ. ಶಾಂತಾ ಆಂಧ್ರಪ್ರದೇಶ ರಾಜ್ಯದ ಹಿಂದೂಪುರ ಅಥವಾ ಅನಂತಪುರ ಲೋಕಸಭಾ ಕ್ಷೇತ್ರದಿಂದ  ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಆದ್ದರಿಂದ ತವರು ಮನೆ ಬಳ್ಳಾರಿ ತೊರೆದು ಗಂಡನ ಮನೆ ಆಂಧ್ರಕ್ಕೆ ತೆರಳಿದ್ದಾರೆ. ಈ ಮೂಲಕ ಮಾಜಿ ಸಂಸದೆ ಜೆ. ಶಾಂತಾ ಆಂಧ್ರಪ್ರದೇಶ ರಾಜ್ಯದಿಂದ ಎರಡನೇ ರಾಜಕೀಯ ಇನ್ಸಿಂಗ್ಸ್ ಪ್ರಾರಂಭ ಮಾಡಲು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್