ಬಿಹಾರದ ನಳಂದಾ ದೇಗುಲದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಭಾರಿ ಕಾಲ್ತುಳಿತ: 9 ಜನರು ಸಾವು

Published : Mar 31, 2026, 06:01 PM IST
Stampede in Nalanda

ಸಾರಾಂಶ

ಬಿಹಾರದ ನಳಂದ ಜಿಲ್ಲೆಯ ಶೀತಲಾ ಮಾತಾ ದೇವಾಲಯದಲ್ಲಿ ಶೀತಲ ಅಷ್ಟಮಿ ಪೂಜೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ನಿರೀಕ್ಷೆ ಮೀರಿ ಜನಸಂದಣಿ ಸೇರಿದ್ದರಿಂದ ಮತ್ತು ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಈ ದುರಂತ ಸಂಭವಿಸಿದೆ. 

ಬಿಹಾರದಲ್ಲಿ ಭೀಕರ ಕಾಲ್ತುಳಿತಕ್ಕೆ 9 ಜನ ಬಲಿ:

ಬಿಹಾರದ ನಳಂದ ಜಿಲ್ಲೆಯ ದೇಗುಲವೊಂದರಲ್ಲಿ ನಡೆದ ಕಾಲ್ತುಳಿತದಲ್ಲಿ ಒಟ್ಟು 9 ಜನ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಶೀತಲಾ ಮಾತಾ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ದುರಂತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಅವರಲ್ಲಿ ಎಂಟು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬ ಪುರುಷ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚೈತ್ರ ಮಾಸದ ಕೊನೆಯ ಮಂಗಳವಾರವಾದ ಶೀತಲ ಅಷ್ಟಮಿ ಕಾರ್ಯಕ್ರಮಕ್ಕೆ ನಿರೀಕ್ಷೆಯನ್ನು ಮೀರಿ ಭಾರಿ ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆ ಈ ದುರಂತ ಸಂಭವಿಸಿದೆ. ಇಷ್ಟೊಂದು ಜನರನ್ನು ನಿಯಂತ್ರಿಸಲು ಅಲ್ಲಿ ಯಾವುದೇ ವ್ಯವಸ್ಥೆ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದರ್ಶನ ಪಡೆಯಲು ಬಂದ ಸಮಯದಲ್ಲಿ ನೂಕು ನುಗ್ಗಲು ಉಂಟಾದ ನಂತರ ಈ ಕಾಲ್ತುಳಿತ ನಡೆದಿದ್ದು, ಘಟನೆಯ ಬಳಿಕ ದೇಗುಲವನ್ನು ಬಂದ್ ಮಾಡಲಾಗಿದೆ. ದೇಗುಲಕ್ಕೆ 10 ಸಾವಿರಕ್ಕೂ ಅಧಿಕ ಜನರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹6 ಲಕ್ಷ ಪರಿಹಾರ ಘೋಷಿಸಿದರೆ, ಕೇಂದ್ರ ಸರ್ಕಾರ ₹2 ಲಕ್ಷ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಹಿಮಾಚಲದ ಗಾಳಿಯನ್ನು ಬಾಟಲ್‌ನಲ್ಲಿ ತುಂಬಿಸಿ ತಂದು ದೆಹಲಿಯಲ್ಲಿ ಮಾರಾಟ ಮಾಡಿದ ಯುವಕ: ವೀಡಿಯೋ ಭಾರಿ ವೈರಲ್

'ಚೈತ್ರ' ಹಬ್ಬದ ಜೊತೆಗೆ, ಮಾ ಶೀತಲಾ ದೇವಿ ದೇವಾಲಯದ ಆವರಣದಲ್ಲಿ ಜಾತ್ರೆಯೂ ಇತ್ತು. ದೇವಾಲಯದ ಸಣ್ಣ ಗರ್ಭಗುಡಿಯು ಜನರಿಂದ ತುಂಬಿ ಹೋಗಿತ್ತು. ಕೆಲವರು ಬೇಗ ಬೇಗ ದರ್ಶನಕ್ಕಾಗಿ ಕ್ಯೂ ಮುರಿಯಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿತು. ಇಲ್ಲಿಯಾವುದೇ ಭದ್ರತಾ ವ್ಯವಸ್ಥೆಗಳು ಜಾರಿಯಲ್ಲಿ ಇರಲಿಲ್ಲ. ದೇವಾಲಯವು ಜನದಟ್ಟಣೆಯಿಂದ ತುಂಬಿತ್ತು, ಮತ್ತು ಒಳಗೆ ಯಾವುದೇ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿಲ್ಲ. ಜನಸಂದಣಿಯನ್ನು ಬೇರೆಡೆಗೆ ತಿರುಗಿಸಲು ಅಥವಾ ಎರಡು ಸಾಲುಗಳನ್ನು ರೂಪಿಸಲು ಯಾವುದೇ ವ್ಯವಸ್ಥೆ ಇರಲಿಲ್ಲ ಎಂದು ಭಕ್ತರೊಬ್ಬರು ಹೇಳಿದ್ದಾರೆ. ದೇಗುಲದ ಅರ್ಚಕರು ಬೇಗ ಬೇಗ ತೆರಳುವಂತೆ ಜನರನ್ನು ಒತ್ತಾಯಿಸುತ್ತಲೇ ಇದ್ದರು. ಈ ಸಮಯದಲ್ಲಿ, ಒಬ್ಬ ಮಹಿಳೆ ತಲೆತಿರುಗಿ ಬಿದ್ದರು. ಕೆಲವರು ಅವಳಿಗೆ ಸಹಾಯ ಮಾಡಲು ಪ್ರಯತ್ನಿಸಿದರೆ, ಇತರರು ಗುಂಪನ್ನು ಮುಂದೆ ತಳ್ಳಿದರು. ಆಗ ಕಾಲ್ತುಳಿತ ಸಂಭವಿಸಿತು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

ಇಲ್ಲಿ ವಿಶೇಷ ಪೂಜೆಗೆ ಜನಸಾಗರವೇ ಹರಿದು ಬರುತ್ತದೆ.

ಈ ದೇವಾಲಯವು ಬಿಹಾರದ ನಳಂದದಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಮಘರ ಗ್ರಾಮದಲ್ಲಿದೆ. ಇಲ್ಲಿ ಚೈತ್ರ ಕೃಷ್ಣ ಪಕ್ಷ ಅಷ್ಟಮಿ ಅಥವಾ ಶೀತಲ ಅಷ್ಟಮಿಯಂದು ಮನೆಗಳಲ್ಲಿ ಒಲೆಗಳನ್ನು ಹೊತ್ತಿಸುವುದಿಲ್ಲ. ಭಕ್ತರು ಒಂದು ದಿನ ಮುಂಚಿತವಾಗಿ ತಯಾರಿಸಿದ ತಣ್ಣನೆಯ ಆಹಾರವನ್ನು ದೇವಿಗೆ ಅರ್ಪಿಸುತ್ತಾರೆ ಇದು ದೇವಾಲಯಕ್ಕೆ ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ.

ಇದನ್ನೂ ಓದಿ: ಶಿರಸಿಯ ಗೌರಿ ಬಾವಿ ತೆಗೆದಂತೆ ಏಕಾಂಗಿಯಾಗಿ ನದಿ ಸ್ವಚ್ಛಗೊಳಿಸಿದ ಬಿಟ್ಟು : ಟೀಕಿಸಿದವರೇ ಮೆಚ್ಚಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಂಜಯ್ ದತ್ ಬಾರ್ & ರೆಸ್ಟೋರೆಂಟ್ ಜೀವಂತ ಮೀನಿನ ಕಾಕ್‌ಟೇಲ್, ವಿವಾದ ಬೆನ್ನಲ್ಲೇ ರದ್ದು
ಹಿಮಾಚಲದ ಗಾಳಿಯನ್ನು ಬಾಟಲ್‌ನಲ್ಲಿ ತುಂಬಿಸಿ ತಂದು ದೆಹಲಿಯಲ್ಲಿ ಮಾರಾಟ ಮಾಡಿದ ಯುವಕ: ವೀಡಿಯೋ ಭಾರಿ ವೈರಲ್