ಸ್ವಾತಂತ್ರ್ಯ ದಿನದಂದು ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಘೋಷಣೆ?

Kannadaprabha News   | Kannada Prabha
Published : Aug 11, 2025, 04:20 AM IST
Fear And Repression In Pakistan-Occupied Kashmir

ಸಾರಾಂಶ

2019ರಲ್ಲಿ ಸಂವಿಧಾನದ 370ನೇ ಪರಿಚ್ಛೇದ ರದ್ದತಿ ಬಳಿಕ ರಾಜ್ಯ ಸ್ಥಾನಮಾನ ಕಳೆದುಕೊಂಡಿರುವ ಜಮ್ಮು- ಕಾಶ್ಮೀರಕ್ಕೆ ಆ.15ರ ಸ್ವಾತಂತ್ರ್ಯ ದಿನದಂದು ಮತ್ತೆ ಆ ಸ್ಥಾನಮಾನ ದೊರಕುವ ಸಾಧ್ಯತೆ ಇದೆ.

 ನವದೆಹಲಿ: 2019ರಲ್ಲಿ ಸಂವಿಧಾನದ 370ನೇ ಪರಿಚ್ಛೇದ ರದ್ದತಿ ಬಳಿಕ ರಾಜ್ಯ ಸ್ಥಾನಮಾನ ಕಳೆದುಕೊಂಡಿರುವ ಜಮ್ಮು- ಕಾಶ್ಮೀರಕ್ಕೆ ಆ.15ರ ಸ್ವಾತಂತ್ರ್ಯ ದಿನದಂದು ಮತ್ತೆ ಆ ಸ್ಥಾನಮಾನ ದೊರಕುವ ಸಾಧ್ಯತೆ ಇದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಆ.15ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಉಲ್ಲೇಖ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಆ.5, 2019ರಂದು ಕೇಂದ್ರ ಸರ್ಕಾರ ತೆಗೆದು ಹಾಕಿ ಕೇಂದ್ರಾಡಳಿತ ಪ್ರದೇಶವನ್ನಾಗಿಸಿತ್ತು. ಈ ವೇಳೆ ಅಖಂಡ ಜಮ್ಮು-ಕಾಶ್ಮೀರವನ್ನು ಲಡಾಖ್‌ ಹಾಗೂ ಜಮ್ಮು-ಕಾಶ್ಮೀರ ಎಂಬ 2 ಪ್ರದೇಶಗಳಾಗಿ ವಿಂಗಡಿಸಿತ್ತು. ಅಂದಿನಿಂದಲೇ ರಾಜ್ಯ ಸ್ಥಾನಮಾನ ಕೊಡುವಂತೆ ಜಮ್ಮು ಕಾಶ್ಮೀರದ ನಾಯಕರ ಬೇಡಿಕೆ ಇದೆ. ಈ ಬಹುದಿನದ ಬೇಡಿಕೆಗೆ ಕೇಂದ್ರ ಸರ್ಕಾರವು ಶೀಘ್ರ ಸ್ಪಂದಿಸಲಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ ಏರ್ಪೋರ್ಟಲ್ಲಿ ಮಾಸ್ಕ್‌ ತೆಗೆಯಲು ಅಲ್ಲು ಹಿಂದೇಟು: ವೈರಲ್‌

ಮುಂಬೈ: ಪುಷ್ಪಾ ಖ್ಯಾತಿಯ ನಟ ಅಲ್ಲು ಅರ್ಜುನ್‌ ಅವರು ಮುಂಬೈ ವಿಮಾನ ನಿಲ್ದಾಣದ ಭದ್ರತಾ ತಪಾಸಣೆ ವೇಳೆ ತಾವು ಧರಿಸಿದ್ದ ಮಾಸ್ಕ್‌ ತೆಗೆಯಲು ಹಿಂದೇಟು ಹಾಕಿದ್ದಅರೆ. ಅವರ ಈ ನಡೆಗೆ ನೆಟ್ಟಿಗರು ಆಕ್ಷೇಪಿಸಿದ್ದಾರೆ.ಅಲ್ಲು ಅವರು ಮುಂಬೈ ಏರ್ಪೋರ್ಟ್‌ನಲ್ಲಿ ಭದ್ರತಾ ತಪಾಸಣೆಗೆ ತೆರಳುವ ವೇಳೆ ಸಿಬ್ಬಂದಿಯು ನಟನಿಗೆ ಮಾಸ್ಕ್‌ ಮತ್ತು ಸನ್‌ಗ್ಲಾಸ್‌ ತೆರೆಯುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕ್ಷಣ ಹೊತ್ತು ಅಸಮಾಧಾನಗೊಂಡ ಅರ್ಜುನ್‌, ಸಿಬ್ಬಂದಿ ಜತೆ ಚರ್ಚೆ ನಡೆಸಿ, ಬಳಿಕ ಮಾಸ್ಕ್‌ ತೆಗೆದು, ಮತ್ತೆ ಧರಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ನಟನ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ‘ನೀವು ನಟರೇ ಆಗಿರಬಹುದು. ಮೊದಲು ನಿಯಮಗಳಿಗೆ ಬದ್ಧರಾಗಿರಿ’ ಎಂದು ಜನರು ತಿವಿದಿದ್ದಾರೆ. ‘ಭದ್ರತಾ ಸಿಬ್ಬಂದಿಯ ನಡೆ ಶೇ.100ರಷ್ಟು ಸರಿಯಿದೆ’ ಎಂದು ಬೆಂಬಲಿಸಿದ್ದಾರೆ.

ಸಿರಿಯಾ ಆಸ್ಪ​ತ್ರೆಯಲ್ಲಿ ಮಂಡಿ ಊರ​ದೇ ಎದ್ದು ನಿಂತ​ವರು ಉಗ್ರ​ರಿಂದ ಹತ್ಯೆ

ಡಮಾ​ಸ್ಕ​ಸ್‌: ಸಿರಿ​ಯಾ​ದಲ್ಲಿ ಆಂತ​ರಿಕ ಸಂಘರ್ಷ ಮಿತಿ ಮೀರು​ತ್ತಿದ್ದು ಸರ್ಕಾ​ರದ ನಿಯಂತ್ರ​ಣ​ದ​ಲ್ಲಿದ್ದ ಆಸ್ಪ​ತ್ರೆ​ಯೊಂದಕ್ಕೆ ನುಗ್ಗಿದ ಉಗ್ರರು ಅಲ್ಲಿನ ಸಿಬ್ಬಂದಿ​ಯನ್ನು ಮಂಡಿ ಊರಿ ಕೂರು​ವ​ಂತೆ ಆದೇ​ಶಿ​ಸಿ​ದ್ದಾರೆ. ಎದ್ದು ನಿಂತ ಸಿಬ್ಬಂದಿ​ಯನ್ನು ಹತ್ಯೆ ಮಾಡಿ​ದ್ದಾ​ರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್