NTA ಸುಧಾರಣೆಗೆ ಕ್ರಮ: 600 ತಜ್ಞರಿಗೆ ಕೊಕ್‌, 4 ಸ್ತರದ ಪ್ರಶ್ನೆಪತ್ರಿಕೆ ಪರಿಶೀಲನೆ ಜಾರಿ

Published : Aug 19, 2026, 05:36 AM IST
Pralhad Joshi Takes Over as Education Minister Amid Exam Protests

ಸಾರಾಂಶ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (ಎನ್‌ಟಿಎ) ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮಹತ್ವದ ಸುಧಾರಣೆಗಳನ್ನು ಜಾರಿಗೆ ತಂದಿದೆ. ಪ್ರಶ್ನೆಪತ್ರಿಕೆ ಪರಿಶೀಲನೆಗೆ 4 ಹಂತದ ವ್ಯವಸ್ಥೆ, 600 ಹಳೆಯ ತಜ್ಞರ ಬದಲಾವಣೆ ಮತ್ತು ಎನ್‌ಟಿಎ ಕಚೇರಿಗಳಿಗೆ ಸಿಐಎಸ್‌ಎಫ್ ಭದ್ರತೆ ಒದಗಿಸುವಂತಹ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಾಗಿದೆ.

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಪ್ರಶ್ನೆಪತ್ರಿಕೆ ಪರಿಶೀಲನೆಗೆ 4 ಹಂತದ ವ್ಯವಸ್ಥೆ, 600 ಹಳೆಯ ತಜ್ಞರ ಬದಲಿಸಿ ಹೊಸಬರ ನೇಮಕ ಹಾಗೂ ಎನ್‌ಟಿಎ ಕಚೇರಿಗಳಿಗೆ ಸಿಐಎಸ್‌ಎಫ್ ಭದ್ರತೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದೆ.

ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿ ಸೋಮವಾರ ಸಭೆ ನಡೆಸಿ, ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

4 ಹಂತದ ತಪಾಸಣಾ ವ್ಯವಸ್ಥೆ

ಪರೀಕ್ಷಾ ಪಾರದರ್ಶಕತೆಯನ್ನು ಹೆಚ್ಚಿಸುವ ಭಾಗವಾಗಿ 600 ತಜ್ಞರನ್ನು ತಂಡದಿಂದ ತೆಗೆದುಹಾಕಿ, ಹೊಸ ತಜ್ಞರನ್ನು ನಿಯೋಜಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಪರಿಶೀಲನೆಯನ್ನು ಬಿಗಿಗೊಳಿಸಲು 4 ಹಂತದ ತಪಾಸಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಅಲ್ಲದೆ, ಮುಂದಿನ 2-3 ವಾರಗಳಲ್ಲಿ 20ರಿಂದ 25 ಹೊಸ ಅಧಿಕಾರಿಗಳನ್ನು ಎನ್‌ಟಿಎ ತಂಡಕ್ಕೆ ಸೇರ್ಪಡೆಗೊಳಿಸಲಾಗುವುದು. ಸಂಸ್ಥೆಯ ಕಚೇರಿಗಳನ್ನು ಶೀಘ್ರದಲ್ಲೇ ಹೊಸ ಆವರಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಅಲ್ಲಿ ಸಿಐಎಸ್‌ಎಫ್ ಸಿಬ್ಬಂದಿಯೊಂದಿಗೆ ಕಟ್ಟುನಿಟ್ಟಿನ ಭದ್ರತೆಯನ್ನು ಒದಗಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: NTA ಸುಧಾರಣೆಗೆ ಕ್ರಮ - 600 ತಜ್ಞರಿಗೆ ಕೊಕ್‌, 4 ಸ್ತರದ ಪ್ರಶ್ನೆಪತ್ರಿಕೆ ಪರಿಶೀಲನೆ ಜಾರಿ
ಲತಾ ಮಂಗೇಶ್ಕರ್‌ ಧ್ವನಿಯ 'ವಂದೇ ಮಾತರಂ' ಪ್ರಸಾರ: ಆಯೋಜಕರ ತಪ್ಪಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಎಚ್ಚರಿಕೆ!