ಶ್ರೀಲಂಕಾದಲ್ಲಿ ಸೀತೆ ಇದ್ದ ವನದ ಕಲ್ಲು ಅಯೋಧ್ಯೆ ರಾಮ ಮಂದಿರಕ್ಕೆ ಆಮದು!

Published : Mar 20, 2021, 11:31 AM ISTUpdated : Mar 20, 2021, 12:04 PM IST
ಶ್ರೀಲಂಕಾದಲ್ಲಿ ಸೀತೆ ಇದ್ದ ವನದ ಕಲ್ಲು ಅಯೋಧ್ಯೆ ರಾಮ ಮಂದಿರಕ್ಕೆ ಆಮದು!

ಸಾರಾಂಶ

ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮ ಮಂದಿರ| ಶ್ರೀಲಂಕಾದಲ್ಲಿ ಸೀತೆ ಇದ್ದ ವನದ ಕಲ್ಲು ಅಯೋಧ್ಯೆ ರಾಮ ಮಂದಿರಕ್ಕೆ ಆಮದು!

ನವದೆಹಲಿ(ಮಾ.20): ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮ ಮಂದಿರಕ್ಕೆ ಶ್ರೀಲಂಕಾದ ಸೀತಾ ಇಲಿಯ (ಅಶೋಕ ವಾಟಿಕಾ)ದಿಂದ ಕಲ್ಲೊಂದನ್ನು ಆಮದು ಮಾಡಿಕೊಳ್ಳಲಾಗುತ್ತಿದೆ.

ಸೀತೆಯನ್ನು ಅಪಹರಿಸಿದ್ದ ರಾವಣ, ಆಕೆಯನ್ನು ಅಶೋಕ ವಾಟಿಕಾದಲ್ಲಿ ಬಂಧನದಲ್ಲಿ ಇರಿಸಿದ್ದ. ಈ ಹಿನ್ನೆಲೆಯಲ್ಲಿ ಸೀತಾ ಮಾತೆ ತಂಗಿದ್ದ ಜಾಗದಿಂದ ಕಲ್ಲೊಂದನ್ನು ತಂದು ಅಯೋಧ್ಯೆ ರಾಮ ಮಂದಿರದ ಆವರಣದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿದೆ. ಭಾರತದಲ್ಲಿನ ಶ್ರೀಲಂಕಾ ಹೈಕಮೀಷನರ್‌ ಮಿಲಿಂದಾ ಮೊರಾಗೊಡಾ ಅವರು ಕಲ್ಲನ್ನು ಭಾರತಕ್ಕೆ ತರಲಿದ್ದಾರೆ.

ಈಗಾಗಲೇ ಅವರಿಗೆ ಕಲ್ಲನ್ನು ಹಸ್ತಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶ್ರೀಲಂಕಾದ ಸೀತಾ ಇಲಿಯಾ ಗ್ರಾಮದಲ್ಲಿ ಸೀತಾ ಮಾತೆಗೆ ಮೀಸಲಾದ ದೇವಾಲಯವೊಂದು ಇದೆ. ಇದೇ ಜಾಗದಲ್ಲಿ ರಾವಣ ಸೀತೆಯನ್ನು ಬಂಧನದಲ್ಲಿ ಇರಿಸಿದ್ದ ಎಂದು ಭಾವಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್